Andolana originals

ಓದುಗರ ಪತ್ರ: ಅಂಗನವಾಡಿಗೆ ನಿವೇಶನ ದಾನ: ಮಾದರಿ ನಡೆ

ತನಗೆ ಬರುವ ಅಲ್ಪ ಸಂಬಳದಲ್ಲಿಯೇ ಸ್ವಲ್ಪ ಹಣವನ್ನು ಉಳಿಸಿ, ಕೂಡಿಟ್ಟು ಖರೀದಿಸಿದ್ದ ನಿವೇಶನವನ್ನು ಅಂಗನವಾಡಿಗೆ ದಾನ ಮಾಡಿರುವ ತುಮಕೂರು ಜಿಲ್ಲೆ ಪಾವಗಡದ ಶಾಂತಮ್ಮನವರ ಕಾರ್ಯ ಶ್ಲಾಘನೀಯ.

ಕೋಟಿ ಕೋಟಿ ಹಣವಿದ್ದರೂ ಒಂದೇ ಒಂದು ರೂಪಾಯಿ ಖರ್ಚು ಮಾಡಲೂ ಹಿಂದೆ ಮುಂದೆ ನೋಡುವ ಈ ಕಾಲದಲ್ಲಿ ತಮ್ಮ ಊರಿನ ಮಕ್ಕಳ ಶಿಕ್ಷಣಕ್ಕಾಗಿ ತಾನು ಕೂಡಿಟ್ಟು ಖರೀದಿಸಿದ್ದ ನಿವೇಶನವನ್ನು ಶಾಂತಮ್ಮ ದಾನ ನೀಡಿರುವುದು ಅವರ ಔದಾರ್ಯಕ್ಕೆ ಸಾಕ್ಷಿಯಾಗಿದೆ. ಸಮಾಜಕ್ಕಾಗಿ ಕೊಟ್ಟಿದ್ದು ಸಾವಿರಪಟ್ಟು ಮರಳುತ್ತದೆ ಎಂಬ ಮಾತಿದೆ. ತಮ್ಮ ಊರಿನ ಪುಟಾಣಿಗಳ ಭವಿಷ್ಯಕ್ಕಾಗಿ ನಿವೇಶನ ನೀಡಿದ ಶಾಂತಮ್ಮನವರ ನಡೆ ಮಾದರಿಯಾಗಿದ್ದು, ಇಂತಹನಿಸ್ವಾರ್ಥ ಮನೋಭಾವನೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕಾಗಿದೆ.

– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

32 mins ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

38 mins ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

42 mins ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

46 mins ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago