ಓದುಗರ ಪತ್ರ
ತನಗೆ ಬರುವ ಅಲ್ಪ ಸಂಬಳದಲ್ಲಿಯೇ ಸ್ವಲ್ಪ ಹಣವನ್ನು ಉಳಿಸಿ, ಕೂಡಿಟ್ಟು ಖರೀದಿಸಿದ್ದ ನಿವೇಶನವನ್ನು ಅಂಗನವಾಡಿಗೆ ದಾನ ಮಾಡಿರುವ ತುಮಕೂರು ಜಿಲ್ಲೆ ಪಾವಗಡದ ಶಾಂತಮ್ಮನವರ ಕಾರ್ಯ ಶ್ಲಾಘನೀಯ.
ಕೋಟಿ ಕೋಟಿ ಹಣವಿದ್ದರೂ ಒಂದೇ ಒಂದು ರೂಪಾಯಿ ಖರ್ಚು ಮಾಡಲೂ ಹಿಂದೆ ಮುಂದೆ ನೋಡುವ ಈ ಕಾಲದಲ್ಲಿ ತಮ್ಮ ಊರಿನ ಮಕ್ಕಳ ಶಿಕ್ಷಣಕ್ಕಾಗಿ ತಾನು ಕೂಡಿಟ್ಟು ಖರೀದಿಸಿದ್ದ ನಿವೇಶನವನ್ನು ಶಾಂತಮ್ಮ ದಾನ ನೀಡಿರುವುದು ಅವರ ಔದಾರ್ಯಕ್ಕೆ ಸಾಕ್ಷಿಯಾಗಿದೆ. ಸಮಾಜಕ್ಕಾಗಿ ಕೊಟ್ಟಿದ್ದು ಸಾವಿರಪಟ್ಟು ಮರಳುತ್ತದೆ ಎಂಬ ಮಾತಿದೆ. ತಮ್ಮ ಊರಿನ ಪುಟಾಣಿಗಳ ಭವಿಷ್ಯಕ್ಕಾಗಿ ನಿವೇಶನ ನೀಡಿದ ಶಾಂತಮ್ಮನವರ ನಡೆ ಮಾದರಿಯಾಗಿದ್ದು, ಇಂತಹನಿಸ್ವಾರ್ಥ ಮನೋಭಾವನೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕಾಗಿದೆ.
– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…