ಓದುಗರ ಪತ್ರ
ಎಸ್ಎಸ್ಎಲ್ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್ ನೀಡಲಾಗುವುದು ಎಂದು ಹೇಳಿರುವುದು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಬೇಸರ ಮೂಡಿಸಿದೆ.
ವರ್ಷಪೂರ್ತಿ ಕಲಿಸಿದ ಗುರುಗಳ ಹಾಗೂ ವಿದ್ಯಾರ್ಥಿಗಳ ಪಾಡೇನು? ಶಿಕ್ಷಕರ ಶ್ರಮಕ್ಕೆ ಹಾಗೂ ಮಕ್ಕಳ ಕಲಿಕೆಗೆ ಬೆಲೆ ಬೇಡವೇ? ನಮ್ಮ ಕನ್ನಡದ ಮಕ್ಕಳನ್ನು ಬರೀ ಕನ್ನಡಕ್ಕೆ ಏಕೆ ಸೀಮಿತಗೊಳಿಸಲಾಗುತ್ತಿದೆ? ಹಿಂದಿ ಕಲಿತರೆ ರಾಷ್ಟ್ರ ಮಟ್ಟದಲ್ಲಿ ಮಕ್ಕಳು ಪ್ರತಿ ನಿಧಿಸಲು, ಬೆಳೆಯಲು ಒಳಿತಾಗುವುದಿಲ್ಲವೇ ಎಂಬ ಪ್ರಶ್ನೆ ಕಾಡುತ್ತದೆ. ಹಿಂದಿ ನಮ್ಮ ದೇಶದಲ್ಲಿ ಅತಿ ಹೆಚ್ಚು ಜನರು ಮಾತನಾಡುವ ಭಾಷೆಯಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಹಲವಾರು ದಶಕಗಳಿಂದ ಹಿಂದಿಯನ್ನು ತೃತೀಯ ಭಾಷೆಯನ್ನಾಗಿ ಕಲಿಸಲಾಗುತ್ತಿದೆ. ಹೀಗಾಗಿ ನಮ್ಮ ಕನ್ನಡ ಮಕ್ಕಳು ಆ ಭಾಷೆಯನ್ನು ಇಷ್ಟಪಟ್ಟು ಕಲಿಯುವುದರಲ್ಲಿ ತಪ್ಪೇನೂ ಇಲ್ಲ. ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ನಿತ್ಯ ಹಿಂದಿ ಕಲಿಸುತ್ತಿರುವ ರಾಜ್ಯದಲ್ಲಿನ ಸಾವಿರಾರು ಶಿಕ್ಷಕರ ಗತಿಯೇನು? ಈ ಬಗ್ಗೆಯೂ ಸರ್ಕಾರ ಚಿಂತಿಸುವುದು ಒಳಿತು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…