ಓದುಗರ ಪತ್ರ
ಎಸ್ಎಸ್ಎಲ್ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್ ನೀಡಲಾಗುವುದು ಎಂದು ಹೇಳಿರುವುದು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಬೇಸರ ಮೂಡಿಸಿದೆ.
ವರ್ಷಪೂರ್ತಿ ಕಲಿಸಿದ ಗುರುಗಳ ಹಾಗೂ ವಿದ್ಯಾರ್ಥಿಗಳ ಪಾಡೇನು? ಶಿಕ್ಷಕರ ಶ್ರಮಕ್ಕೆ ಹಾಗೂ ಮಕ್ಕಳ ಕಲಿಕೆಗೆ ಬೆಲೆ ಬೇಡವೇ? ನಮ್ಮ ಕನ್ನಡದ ಮಕ್ಕಳನ್ನು ಬರೀ ಕನ್ನಡಕ್ಕೆ ಏಕೆ ಸೀಮಿತಗೊಳಿಸಲಾಗುತ್ತಿದೆ? ಹಿಂದಿ ಕಲಿತರೆ ರಾಷ್ಟ್ರ ಮಟ್ಟದಲ್ಲಿ ಮಕ್ಕಳು ಪ್ರತಿ ನಿಧಿಸಲು, ಬೆಳೆಯಲು ಒಳಿತಾಗುವುದಿಲ್ಲವೇ ಎಂಬ ಪ್ರಶ್ನೆ ಕಾಡುತ್ತದೆ. ಹಿಂದಿ ನಮ್ಮ ದೇಶದಲ್ಲಿ ಅತಿ ಹೆಚ್ಚು ಜನರು ಮಾತನಾಡುವ ಭಾಷೆಯಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಹಲವಾರು ದಶಕಗಳಿಂದ ಹಿಂದಿಯನ್ನು ತೃತೀಯ ಭಾಷೆಯನ್ನಾಗಿ ಕಲಿಸಲಾಗುತ್ತಿದೆ. ಹೀಗಾಗಿ ನಮ್ಮ ಕನ್ನಡ ಮಕ್ಕಳು ಆ ಭಾಷೆಯನ್ನು ಇಷ್ಟಪಟ್ಟು ಕಲಿಯುವುದರಲ್ಲಿ ತಪ್ಪೇನೂ ಇಲ್ಲ. ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ನಿತ್ಯ ಹಿಂದಿ ಕಲಿಸುತ್ತಿರುವ ರಾಜ್ಯದಲ್ಲಿನ ಸಾವಿರಾರು ಶಿಕ್ಷಕರ ಗತಿಯೇನು? ಈ ಬಗ್ಗೆಯೂ ಸರ್ಕಾರ ಚಿಂತಿಸುವುದು ಒಳಿತು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…