Andolana originals

ಓದುಗರ ಪತ್ರ: ಪರೀಕ್ಷೆ ವೇಳೆ ವಿದ್ಯುತ್ ಕಡಿತ ಮಾಡದಿರಿ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಈಗಾಗಲೇ ೧೬,೦೦೦ ಮೆಗಾ ವ್ಯಾಟ್ ದಾಟಿದ್ದರೂ ಮುನ್ನೆಚ್ಚರಿಕೆ ವಹಿಸುವಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ವಿಫಲವಾಗಿದೆ. ಬೆಂಗಳೂರಿನಲ್ಲೇ ದಿನಕ್ಕೆ ೫ ಗಂಟೆ ವಿದ್ಯುತ್ ಕಡಿತವಾಗುತ್ತಿದೆ. ಗ್ರಾಮೀಣ ಭಾಗದ ಶೇ.೭೦ ವಿದ್ಯಾರ್ಥಿಗಳು ರಾತ್ರಿ ಓದಿಗೆ ವಿದ್ಯುತ್ತನ್ನೇ ಅವಲಂಬಿಸಿದ್ದಾರೆ. ಸಂಜೆ ೬ ರಿಂದ ಬೆಳಿಗ್ಗೆ ೬ ರವರೆಗೆ ಕಡ್ಡಾಯವಾಗಿ ಲೋಡ್ ಶೆಡ್ಡಿಂಗ್ ನಿಲ್ಲಿಸಬೇಕು. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳ ಏಕಾಗ್ರತೆಗೆ ಭಂಗ ತರುವ ಈ ಕ್ರಮವನ್ನು ಕೈಬಿಟ್ಟು, ಸರ್ಕಾರವು ಪರ್ಯಾಯ ಮಾರ್ಗಗಳ ಮೂಲಕ ನಿರಂತರ ವಿದ್ಯುತ್ ಒದಗಿಸಲು ಆದ್ಯತೆ ನೀಡಬೇಕು.

-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

2 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

2 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

2 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

3 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

3 hours ago

ಕಾವೇರಿ ಕಣಿವೆ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿತ

ಕೆ.ಬಿ.ರಮೇಶನಾಯಕ ೨೦೧೫, ೨೦೧೬ರ ಅವಧಿಯಲ್ಲಿ ಇದ್ದಷ್ಟೇ ಈ ಬಾರಿಯೂ ಜಲಾಶಯಗಳಲ್ಲಿ ನೀರು ಮೈಸೂರು: ಕೇರಳದ ವಯನಾಡು, ಕೊಡಗಿನ ಭಾಗಮಂಡಲ ಭಾಗದಲ್ಲಿ…

3 hours ago