Categories: Andolana originals

ಓದುಗರ ಪತ್ರ: ನೌಕರರಿಗೆ ವಿಶ್ರಾಂತಿ ಬೇಡವೇ?

ಮುಂಬೈನಲ್ಲಿ ನಡೆದ ಸಿಎನ್‌ ಬಿಸಿ ಜಾಗತಿಕ ನಾಯಕತ್ವ ಶೃಂಗ ಸಭೆಯಲ್ಲಿ ಇನ್ಫೋಸಿಸ್ ಸಹ ಸಂಸ್ಥಾಪಕ, ಎನ್.ಆರ್.ನಾರಾಯಣಮೂರ್ತಿಯವರು ಭಾಗವಹಿಸಿ, ‘ಸಾಫ್ಟ್‌ವೇರ್ ಕಂಪೆನಿಗಳ ಉದ್ಯೋಗಿಗಳು ದೇಶದ ಹಿತಕ್ಕಾಗಿ ವಾರಕ್ಕೆ 70 ಗಂಟೆಗಳ ಕಾಲ ದುಡಿಯಬೇಕು. ಪ್ರಧಾನಿ ಮೋದಿಯವರು ವಾರಕ್ಕೆ 100 ಗಂಟೆಗಳ ಕಾಲ ಕೆಲಸ ಮಾಡುತ್ತಿಲ್ಲವೇ’ ಎಂದು ಹೇಳಿರುವುದಾಗಿ ವರದಿಯಾಗಿದೆ. ಇದು ನಾರಾಯಣ ಮೂರ್ತಿಯವರ ವೈಯಕ್ತಿಕ ಅಭಿಪ್ರಾಯವನ್ನೇ ಈ ಹಿಂದೆಯೂ ಇವರು ಇಂತಹದೊಂದು ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಐಟಿ-ಬಿಟಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ವಾರಂತ್ಯದ ರಜೆ ಬಿಟ್ಟರೆ ಉಳಿದ 5 ದಿನಗಳೂ ಅವರು ಒತ್ತಡದಲ್ಲಿಯೇ ಕೆಲಸ ಮಾಡಬೇಕು. ಹೀಗಿರುವಾಗ ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಎಂದರೆ ಅವರು ಕನಿಷ್ಠ ದಿನಕ್ಕೆ 14 ಗಂಟೆಗಳ ಕಾಲ ದುಡಿಯಬೇಕು. ಇದು ಸಾಧ್ಯವೇ? ಬೆಂಗಳೂರು, ಮುಂಬೈ, ದಿಲ್ಲಿ, ಕೊಲ್ಕತ್ತಾದಂತಹ ನಗರಗಳಲ್ಲಿ ಉದ್ಯೋಗಿಗಳು ತಮ್ಮ ಮನೆಗಳಿಂದ ಕೆಲಸ ಮಾಡುವ ಸ್ಥಳಗಳಿಗೆ ತೆರಳಲು ಕಷ್ಟ. ಒಂದೆರಡು ಗಂಟೆಗಳಾದರೂ ಬೇಕು. ಹೀಗಿರುವಾಗ ಅವರು ಪ್ರಯಾಣದಲ್ಲಿಯೇ 4 ಗಂಟೆಗಳನ್ನು ಕಳೆಯುತ್ತಾರೆ. ಉಳಿದ 20 ಗಂಟೆಗಳಲ್ಲಿ 14 ಗಂಟೆಗಳ ಕಾಲ ಅವರು ಕೆಲಸ ಮಾಡಿದರೆ, ಅವರ ಆರೋಗ್ಯದ ಸ್ಥಿತಿ ಏನಾಗಬಹುದು? ಅವರಿಗೂ ಒಂದು ಕುಟುಂಬವಿರುವುದಿಲ್ಲವೇ? ಆ ಕುಟುಂಬಕ್ಕೂ ಅವರು ಸಮಯ ನೀಡಬೇಕು. ಅಮೆರಿಕ, ರಷ್ಯಾ, ಜಪಾನ್, ಜರ್ಮನಿಗಳಲ್ಲಿ ಉದ್ಯೋಗಿಗಳಿಗೆ ವಾರದಲ್ಲಿ 48 ಗಂಟೆಗಳ ಕೆಲಸದ ಬದಲು 36 ಗಂಟೆಗಳಿಗೆ ಇಳಿಕೆ ಮಾಡಲಾಗಿದೆ. ಇದರ ಅರಿವಿದ್ದರೂ ನಾರಾಯಣಮೂರ್ತಿ ಯವರು ಇಂತಹ ಹೇಳಿಕೆ ಕೊಡುವುದು ಸರಿಯಲ್ಲ. ವಿಶ್ವ ಆರೋಗ್ಯ ಸಂಸ್ಥೆಯೇ ಒಬ್ಬ ವ್ಯಕ್ತಿ ದಿನಕ್ಕೆ 8 ಗಂಟೆಗಳ ಕಾಲ ದುಡಿಯಬೇಕು ಎಂದಿದೆ. ನಾರಾಯಣ ಮೂರ್ತಿಯವರು ಹೇಳುವಂತೆ ದಿನಕ್ಕೆ 70 ಗಂಟೆಗಳ ಕಾಲ ದುಡಿಯಬೇಕು ಎಂದರೆ ಅದು ನೌಕರರ ಮೇಲೆ ದಬ್ಬಾಳಿಕೆ ಮಾಡಿದಂತಾಗುತ್ತದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

7 mins ago

ಸುವರ್ಣಸೌಧದಲ್ಲಿ ನಾಟಿ ಕೋಳಿ ಬಗ್ಗೆ ಸ್ವಾರಸ್ಯಕರ ಚರ್ಚೆ..!

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…

15 mins ago

ಯುವನಿಧಿ | 2.84 ಲಕ್ಷ ಮಂದಿಗೆ 757 ಕೋಟಿ ರೂ.ಆರ್ಥಿಕ ನೆರವು

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…

33 mins ago

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…

58 mins ago

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

2 hours ago

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…

2 hours ago