ಮುಂಬೈನಲ್ಲಿ ನಡೆದ ಸಿಎನ್ ಬಿಸಿ ಜಾಗತಿಕ ನಾಯಕತ್ವ ಶೃಂಗ ಸಭೆಯಲ್ಲಿ ಇನ್ಫೋಸಿಸ್ ಸಹ ಸಂಸ್ಥಾಪಕ, ಎನ್.ಆರ್.ನಾರಾಯಣಮೂರ್ತಿಯವರು ಭಾಗವಹಿಸಿ, ‘ಸಾಫ್ಟ್ವೇರ್ ಕಂಪೆನಿಗಳ ಉದ್ಯೋಗಿಗಳು ದೇಶದ ಹಿತಕ್ಕಾಗಿ ವಾರಕ್ಕೆ 70 ಗಂಟೆಗಳ ಕಾಲ ದುಡಿಯಬೇಕು. ಪ್ರಧಾನಿ ಮೋದಿಯವರು ವಾರಕ್ಕೆ 100 ಗಂಟೆಗಳ ಕಾಲ ಕೆಲಸ ಮಾಡುತ್ತಿಲ್ಲವೇ’ ಎಂದು ಹೇಳಿರುವುದಾಗಿ ವರದಿಯಾಗಿದೆ. ಇದು ನಾರಾಯಣ ಮೂರ್ತಿಯವರ ವೈಯಕ್ತಿಕ ಅಭಿಪ್ರಾಯವನ್ನೇ ಈ ಹಿಂದೆಯೂ ಇವರು ಇಂತಹದೊಂದು ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಐಟಿ-ಬಿಟಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ವಾರಂತ್ಯದ ರಜೆ ಬಿಟ್ಟರೆ ಉಳಿದ 5 ದಿನಗಳೂ ಅವರು ಒತ್ತಡದಲ್ಲಿಯೇ ಕೆಲಸ ಮಾಡಬೇಕು. ಹೀಗಿರುವಾಗ ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಎಂದರೆ ಅವರು ಕನಿಷ್ಠ ದಿನಕ್ಕೆ 14 ಗಂಟೆಗಳ ಕಾಲ ದುಡಿಯಬೇಕು. ಇದು ಸಾಧ್ಯವೇ? ಬೆಂಗಳೂರು, ಮುಂಬೈ, ದಿಲ್ಲಿ, ಕೊಲ್ಕತ್ತಾದಂತಹ ನಗರಗಳಲ್ಲಿ ಉದ್ಯೋಗಿಗಳು ತಮ್ಮ ಮನೆಗಳಿಂದ ಕೆಲಸ ಮಾಡುವ ಸ್ಥಳಗಳಿಗೆ ತೆರಳಲು ಕಷ್ಟ. ಒಂದೆರಡು ಗಂಟೆಗಳಾದರೂ ಬೇಕು. ಹೀಗಿರುವಾಗ ಅವರು ಪ್ರಯಾಣದಲ್ಲಿಯೇ 4 ಗಂಟೆಗಳನ್ನು ಕಳೆಯುತ್ತಾರೆ. ಉಳಿದ 20 ಗಂಟೆಗಳಲ್ಲಿ 14 ಗಂಟೆಗಳ ಕಾಲ ಅವರು ಕೆಲಸ ಮಾಡಿದರೆ, ಅವರ ಆರೋಗ್ಯದ ಸ್ಥಿತಿ ಏನಾಗಬಹುದು? ಅವರಿಗೂ ಒಂದು ಕುಟುಂಬವಿರುವುದಿಲ್ಲವೇ? ಆ ಕುಟುಂಬಕ್ಕೂ ಅವರು ಸಮಯ ನೀಡಬೇಕು. ಅಮೆರಿಕ, ರಷ್ಯಾ, ಜಪಾನ್, ಜರ್ಮನಿಗಳಲ್ಲಿ ಉದ್ಯೋಗಿಗಳಿಗೆ ವಾರದಲ್ಲಿ 48 ಗಂಟೆಗಳ ಕೆಲಸದ ಬದಲು 36 ಗಂಟೆಗಳಿಗೆ ಇಳಿಕೆ ಮಾಡಲಾಗಿದೆ. ಇದರ ಅರಿವಿದ್ದರೂ ನಾರಾಯಣಮೂರ್ತಿ ಯವರು ಇಂತಹ ಹೇಳಿಕೆ ಕೊಡುವುದು ಸರಿಯಲ್ಲ. ವಿಶ್ವ ಆರೋಗ್ಯ ಸಂಸ್ಥೆಯೇ ಒಬ್ಬ ವ್ಯಕ್ತಿ ದಿನಕ್ಕೆ 8 ಗಂಟೆಗಳ ಕಾಲ ದುಡಿಯಬೇಕು ಎಂದಿದೆ. ನಾರಾಯಣ ಮೂರ್ತಿಯವರು ಹೇಳುವಂತೆ ದಿನಕ್ಕೆ 70 ಗಂಟೆಗಳ ಕಾಲ ದುಡಿಯಬೇಕು ಎಂದರೆ ಅದು ನೌಕರರ ಮೇಲೆ ದಬ್ಬಾಳಿಕೆ ಮಾಡಿದಂತಾಗುತ್ತದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…