Categories: Andolana originals

ಓದುಗರ ಪತ್ರ: ನೌಕರರಿಗೆ ವಿಶ್ರಾಂತಿ ಬೇಡವೇ?

ಮುಂಬೈನಲ್ಲಿ ನಡೆದ ಸಿಎನ್‌ ಬಿಸಿ ಜಾಗತಿಕ ನಾಯಕತ್ವ ಶೃಂಗ ಸಭೆಯಲ್ಲಿ ಇನ್ಫೋಸಿಸ್ ಸಹ ಸಂಸ್ಥಾಪಕ, ಎನ್.ಆರ್.ನಾರಾಯಣಮೂರ್ತಿಯವರು ಭಾಗವಹಿಸಿ, ‘ಸಾಫ್ಟ್‌ವೇರ್ ಕಂಪೆನಿಗಳ ಉದ್ಯೋಗಿಗಳು ದೇಶದ ಹಿತಕ್ಕಾಗಿ ವಾರಕ್ಕೆ 70 ಗಂಟೆಗಳ ಕಾಲ ದುಡಿಯಬೇಕು. ಪ್ರಧಾನಿ ಮೋದಿಯವರು ವಾರಕ್ಕೆ 100 ಗಂಟೆಗಳ ಕಾಲ ಕೆಲಸ ಮಾಡುತ್ತಿಲ್ಲವೇ’ ಎಂದು ಹೇಳಿರುವುದಾಗಿ ವರದಿಯಾಗಿದೆ. ಇದು ನಾರಾಯಣ ಮೂರ್ತಿಯವರ ವೈಯಕ್ತಿಕ ಅಭಿಪ್ರಾಯವನ್ನೇ ಈ ಹಿಂದೆಯೂ ಇವರು ಇಂತಹದೊಂದು ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಐಟಿ-ಬಿಟಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ವಾರಂತ್ಯದ ರಜೆ ಬಿಟ್ಟರೆ ಉಳಿದ 5 ದಿನಗಳೂ ಅವರು ಒತ್ತಡದಲ್ಲಿಯೇ ಕೆಲಸ ಮಾಡಬೇಕು. ಹೀಗಿರುವಾಗ ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಎಂದರೆ ಅವರು ಕನಿಷ್ಠ ದಿನಕ್ಕೆ 14 ಗಂಟೆಗಳ ಕಾಲ ದುಡಿಯಬೇಕು. ಇದು ಸಾಧ್ಯವೇ? ಬೆಂಗಳೂರು, ಮುಂಬೈ, ದಿಲ್ಲಿ, ಕೊಲ್ಕತ್ತಾದಂತಹ ನಗರಗಳಲ್ಲಿ ಉದ್ಯೋಗಿಗಳು ತಮ್ಮ ಮನೆಗಳಿಂದ ಕೆಲಸ ಮಾಡುವ ಸ್ಥಳಗಳಿಗೆ ತೆರಳಲು ಕಷ್ಟ. ಒಂದೆರಡು ಗಂಟೆಗಳಾದರೂ ಬೇಕು. ಹೀಗಿರುವಾಗ ಅವರು ಪ್ರಯಾಣದಲ್ಲಿಯೇ 4 ಗಂಟೆಗಳನ್ನು ಕಳೆಯುತ್ತಾರೆ. ಉಳಿದ 20 ಗಂಟೆಗಳಲ್ಲಿ 14 ಗಂಟೆಗಳ ಕಾಲ ಅವರು ಕೆಲಸ ಮಾಡಿದರೆ, ಅವರ ಆರೋಗ್ಯದ ಸ್ಥಿತಿ ಏನಾಗಬಹುದು? ಅವರಿಗೂ ಒಂದು ಕುಟುಂಬವಿರುವುದಿಲ್ಲವೇ? ಆ ಕುಟುಂಬಕ್ಕೂ ಅವರು ಸಮಯ ನೀಡಬೇಕು. ಅಮೆರಿಕ, ರಷ್ಯಾ, ಜಪಾನ್, ಜರ್ಮನಿಗಳಲ್ಲಿ ಉದ್ಯೋಗಿಗಳಿಗೆ ವಾರದಲ್ಲಿ 48 ಗಂಟೆಗಳ ಕೆಲಸದ ಬದಲು 36 ಗಂಟೆಗಳಿಗೆ ಇಳಿಕೆ ಮಾಡಲಾಗಿದೆ. ಇದರ ಅರಿವಿದ್ದರೂ ನಾರಾಯಣಮೂರ್ತಿ ಯವರು ಇಂತಹ ಹೇಳಿಕೆ ಕೊಡುವುದು ಸರಿಯಲ್ಲ. ವಿಶ್ವ ಆರೋಗ್ಯ ಸಂಸ್ಥೆಯೇ ಒಬ್ಬ ವ್ಯಕ್ತಿ ದಿನಕ್ಕೆ 8 ಗಂಟೆಗಳ ಕಾಲ ದುಡಿಯಬೇಕು ಎಂದಿದೆ. ನಾರಾಯಣ ಮೂರ್ತಿಯವರು ಹೇಳುವಂತೆ ದಿನಕ್ಕೆ 70 ಗಂಟೆಗಳ ಕಾಲ ದುಡಿಯಬೇಕು ಎಂದರೆ ಅದು ನೌಕರರ ಮೇಲೆ ದಬ್ಬಾಳಿಕೆ ಮಾಡಿದಂತಾಗುತ್ತದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

58 mins ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

3 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

3 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

3 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

4 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

7 hours ago