Categories: Andolana originals

ಓದುಗರ ಪತ್ರ: ನೌಕರರಿಗೆ ವಿಶ್ರಾಂತಿ ಬೇಡವೇ?

ಮುಂಬೈನಲ್ಲಿ ನಡೆದ ಸಿಎನ್‌ ಬಿಸಿ ಜಾಗತಿಕ ನಾಯಕತ್ವ ಶೃಂಗ ಸಭೆಯಲ್ಲಿ ಇನ್ಫೋಸಿಸ್ ಸಹ ಸಂಸ್ಥಾಪಕ, ಎನ್.ಆರ್.ನಾರಾಯಣಮೂರ್ತಿಯವರು ಭಾಗವಹಿಸಿ, ‘ಸಾಫ್ಟ್‌ವೇರ್ ಕಂಪೆನಿಗಳ ಉದ್ಯೋಗಿಗಳು ದೇಶದ ಹಿತಕ್ಕಾಗಿ ವಾರಕ್ಕೆ 70 ಗಂಟೆಗಳ ಕಾಲ ದುಡಿಯಬೇಕು. ಪ್ರಧಾನಿ ಮೋದಿಯವರು ವಾರಕ್ಕೆ 100 ಗಂಟೆಗಳ ಕಾಲ ಕೆಲಸ ಮಾಡುತ್ತಿಲ್ಲವೇ’ ಎಂದು ಹೇಳಿರುವುದಾಗಿ ವರದಿಯಾಗಿದೆ. ಇದು ನಾರಾಯಣ ಮೂರ್ತಿಯವರ ವೈಯಕ್ತಿಕ ಅಭಿಪ್ರಾಯವನ್ನೇ ಈ ಹಿಂದೆಯೂ ಇವರು ಇಂತಹದೊಂದು ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಐಟಿ-ಬಿಟಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ವಾರಂತ್ಯದ ರಜೆ ಬಿಟ್ಟರೆ ಉಳಿದ 5 ದಿನಗಳೂ ಅವರು ಒತ್ತಡದಲ್ಲಿಯೇ ಕೆಲಸ ಮಾಡಬೇಕು. ಹೀಗಿರುವಾಗ ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಎಂದರೆ ಅವರು ಕನಿಷ್ಠ ದಿನಕ್ಕೆ 14 ಗಂಟೆಗಳ ಕಾಲ ದುಡಿಯಬೇಕು. ಇದು ಸಾಧ್ಯವೇ? ಬೆಂಗಳೂರು, ಮುಂಬೈ, ದಿಲ್ಲಿ, ಕೊಲ್ಕತ್ತಾದಂತಹ ನಗರಗಳಲ್ಲಿ ಉದ್ಯೋಗಿಗಳು ತಮ್ಮ ಮನೆಗಳಿಂದ ಕೆಲಸ ಮಾಡುವ ಸ್ಥಳಗಳಿಗೆ ತೆರಳಲು ಕಷ್ಟ. ಒಂದೆರಡು ಗಂಟೆಗಳಾದರೂ ಬೇಕು. ಹೀಗಿರುವಾಗ ಅವರು ಪ್ರಯಾಣದಲ್ಲಿಯೇ 4 ಗಂಟೆಗಳನ್ನು ಕಳೆಯುತ್ತಾರೆ. ಉಳಿದ 20 ಗಂಟೆಗಳಲ್ಲಿ 14 ಗಂಟೆಗಳ ಕಾಲ ಅವರು ಕೆಲಸ ಮಾಡಿದರೆ, ಅವರ ಆರೋಗ್ಯದ ಸ್ಥಿತಿ ಏನಾಗಬಹುದು? ಅವರಿಗೂ ಒಂದು ಕುಟುಂಬವಿರುವುದಿಲ್ಲವೇ? ಆ ಕುಟುಂಬಕ್ಕೂ ಅವರು ಸಮಯ ನೀಡಬೇಕು. ಅಮೆರಿಕ, ರಷ್ಯಾ, ಜಪಾನ್, ಜರ್ಮನಿಗಳಲ್ಲಿ ಉದ್ಯೋಗಿಗಳಿಗೆ ವಾರದಲ್ಲಿ 48 ಗಂಟೆಗಳ ಕೆಲಸದ ಬದಲು 36 ಗಂಟೆಗಳಿಗೆ ಇಳಿಕೆ ಮಾಡಲಾಗಿದೆ. ಇದರ ಅರಿವಿದ್ದರೂ ನಾರಾಯಣಮೂರ್ತಿ ಯವರು ಇಂತಹ ಹೇಳಿಕೆ ಕೊಡುವುದು ಸರಿಯಲ್ಲ. ವಿಶ್ವ ಆರೋಗ್ಯ ಸಂಸ್ಥೆಯೇ ಒಬ್ಬ ವ್ಯಕ್ತಿ ದಿನಕ್ಕೆ 8 ಗಂಟೆಗಳ ಕಾಲ ದುಡಿಯಬೇಕು ಎಂದಿದೆ. ನಾರಾಯಣ ಮೂರ್ತಿಯವರು ಹೇಳುವಂತೆ ದಿನಕ್ಕೆ 70 ಗಂಟೆಗಳ ಕಾಲ ದುಡಿಯಬೇಕು ಎಂದರೆ ಅದು ನೌಕರರ ಮೇಲೆ ದಬ್ಬಾಳಿಕೆ ಮಾಡಿದಂತಾಗುತ್ತದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

46 mins ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

14 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

15 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

22 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

22 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

1 day ago