ಓದುಗರ ಪತ್ರ
ಇತ್ತೀಚೆಗೆ ಕೆಲವು ರಾಜಕಾರಣಿಗಳು ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ‘ಕ್ರಾಂತಿ’ ಯಾಗುತ್ತದೆ ಎಂದು ಹುಯಿಲೆಬ್ಬಿಸುತ್ತಿರುವುದು ಮಾಧ್ಯಮಗಳಲ್ಲಿವರದಿಯಾಗುತ್ತಿದೆ. ‘ಕ್ರಾಂತಿ’ ಎಂಬ ಪದಕ್ಕೆ ಅತ್ಯಂತ ವಿಶಾಲವಾದ ಅರ್ಥವಿದೆ. ಜಗತ್ತಿನ ಇತಿಹಾಸದಲ್ಲಿ ಫ್ರಾನ್ಸ್ ಕ್ರಾಂತಿ, ಕೈಗಾರಿಕಾ ಕ್ರಾಂತಿ, ಹಸಿರು ಕ್ರಾಂತಿ, ಸೇರಿದಂತೆ ನೂರಾರು ಕ್ರಾಂತಿಗಳು ಹಾಸು ಹೊಕ್ಕಾಗಿವೆ. ವಿಶ್ವದ ಬಹುತೇಕ ರಾಷ್ಟ್ರಗಳು ಒಂದಲ್ಲಾ ಒಂದು ರೀತಿಯ ಕ್ರಾಂತಿಗೆ ಒಳಗಾಗಿರುವುದು ಇತಿಹಾಸದ ಪುಟಗಳಲ್ಲಿ ಕಂಡು ಬರುತ್ತದೆ.
ಕ್ರಾಂತಿ ಎಂದರೆ, ದುಷ್ಟ ಆಡಳಿತದ ಕೊನೆ ಹಾಗೂ ಹೊಸ ವ್ಯವಸ್ಥೆಯ ಉಗಮ ಎಂಬ ಸಾಮಾನ್ಯ ಅರ್ಥವಿದೆ. ದುರಾಡಳಿತದಿಂದ ಬೇಸತ್ತ ಜನತೆ, ಹೊಸ ರೀತಿಯ ಆಡಳಿತ ಬಯಸಿ ಕ್ರಾಂತಿಗೆ ಮುನ್ನುಡಿ ಬರೆಯುವುದು ಸಹಜವಾಗಿದೆ. ಆದರೆ, ಒಂದು ರಾಜಕೀಯ ಪಕ್ಷದ ನಾಯಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ‘ಕ್ರಾಂತಿ ’ಎಂಬ ಪದವನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳನ್ನು ಹೊಂದಿರುವ ಕೆಲವು ರಾಜಕಾರಣಿಗಳು ಬಳಸುತ್ತಿರುವುದು ವಿಷಾದಕರ ಸಂಗತಿಯಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…