ಓದುಗರ ಪತ್ರ
ಹಿಂದೂ ಧರ್ಮ ಪಾಲನೆ ಮಾಡುವವರು ಧಾರ್ಮಿಕ ಶ್ರದ್ಧೆಯಿಂದ ಸ್ವಯಂಪ್ರೇರಿತರಾಗಿ ಮಹಾಕುಂಭಮೇಳದಲ್ಲಿ ಭಾಗವಹಿಸಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಆದರೆ ಕೆಲ ರಾಜಕಾರಣಿಗಳು ಇದನ್ನು ಟೀಕಿಸುತ್ತಿದ್ದು, ‘ಕುಂಭಮೇಳದಲ್ಲಿ ಸ್ನಾನ ಮಾಡುವುದರಿಂದ ಬಡತನ ನಿರ್ಮೂಲನೆ ಆಗುತ್ತದೆಯೇ?’ ಎಂದು ಲೇವಡಿ ಮಾಡುತ್ತಾ ಕೋಟ್ಯಂತರ ಹಿಂದೂ ಸಮುದಾಯದವರ ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತಿದ್ದಾರೆ.
ಅಖಿಲೇಶ್ ಯಾದವ್ ಅಧಿಕಾರದಲ್ಲಿದ್ದಾಗ ನಡೆದ ಇಂತಹ ಧಾರ್ಮಿಕ ಸಮಾರಂಭಗಳ ಬಗ್ಗೆ ಧ್ವನಿ ಎತ್ತದ ಹಾಗೂ ಇತರೆ ಯಾವುದೇ ಧರ್ಮಗಳ ಆಚರಣೆಗಳ ಬಗ್ಗೆ ಮಾತನಾಡದೆ ಕೇವಲ ಒಂದು ಧರ್ಮದ ಎಲ್ಲ ಧಾರ್ಮಿಕ ಆಚರಣೆಗಳನ್ನು ಲೇವಡಿ ಮಾಡುವುದು ಸೊಗಲಾಡಿತನದ ಪರಮಾವಧಿ ಅಲ್ಲವೇ? ೩೫-೪೦ ಕೋಟಿ ಜನ ಸೇರಿರುವ ಕುಂಭಮೇಳದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಾ, ‘ನನ್ನ ಅಂದಾಜಿನ ಪ್ರಕಾರ ಅಲ್ಲಿನ ಕಾಲ್ತುಳಿತದಲ್ಲಿ ೧೦೦೦ ಮಂದಿ ಸಾವನ್ನಪ್ಪಿದ್ದಾರೆ’ ಎನ್ನುವ ಮಲ್ಲಿಕಾರ್ಜುನ ಖರ್ಗೆರವರ ಹೇಳಿಕೆ ನಿಜಕ್ಕೂ ಖಂಡನೀಯ. ಹಿಂದೂಗಳ ಭಾವನೆಗೆ ಧಕ್ಕೆ ತರುವ ಇಂತಹ ಹೇಳಿಕೆಗಳಿಗೆ ಧಿಕ್ಕಾರವಿರಲಿ. ಇನ್ನಾದರೂ ಕಾಂಗ್ರೆಸ್ ಪಕ್ಷದ ಕೆಲ ನಾಯಕರು ತಮ್ಮ ಸ್ಥಾನಕ್ಕೆ ಘನತೆ ತರುವಂತೆ ನಡೆದುಕೊಳ್ಳಲಿ.
-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…