Andolana originals

ಓದುಗರ ಪತ್ರ: ಪೌರ ಕಾರ್ಮಿಕರನ್ನು ನಿಕೃಷ್ಟವಾಗಿ ಕಾಣದಿರಿ

ನಮ್ಮ ನಗರಗಳನ್ನು ಸ್ವಚ್ಛವಾಗಿಡಲು ಮಳೆ, ಚಳಿಯನ್ನು ಲೆಕ್ಕಿಸದೆ ಪ್ರತಿದಿನ ಬೆಳಿಗ್ಗೆ ಮನೆಹತ್ತಿರ ಬರುವ ಪೌರಕಾರ್ಮಿಕರನ್ನು ನಾವುಗಳು ಕಸದವರು ಎಂದು ಕರೆಯುತ್ತೇವೆ.! ಆದರೆ, ನಿಜವಾಗಿಯೂ ಕಸದವರು ಯಾರು? ಕಸವನ್ನು ರಸ್ತೆ ಮೇಲೆ, ಮೋರಿಯಲ್ಲಿ, ಎಲ್ಲೆಂದರಲ್ಲಿ ಎಸೆದು, ಸುತ್ತಮುತ್ತಲಿನ ಪರಿಸರವನ್ನು ಕೊಳಕು ಮಾಡುವ ನಾವುಗಳು ನಿಜವಾದ ಕಸದವರು.

ಆ ಕಸವನ್ನು ಎತ್ತಿ, ನಮ್ಮ ನಗರವನ್ನು ಸ್ವಚ್ಛವಾಗಿಸಿ, ಸುಂದರವಾಗಿಡಲು ತಮ್ಮ ಆರೋಗ್ಯವನ್ನೇ ಪಣಕ್ಕಿಟ್ಟು ದುಡಿಯುವವರು ಈ ಪೌರಕಾರ್ಮಿಕರು. ಹಾಗಾಗಿ, ಅವರನ್ನು ಕಸದವರು ಎಂದು ಕರೆಯುವುದು ಅವರುಗಳಿಗೆ ನಾವು ಮಾಡುವ ದೊಡ್ಡ ಅಪಮಾನ. ಬದಲಾಗಿ ನಾವು ಅವರನ್ನು ಸ್ವಚ್ಛತಾಗಾರರು ಎಂದು ಕರೆಯಬೇಕು. ಹಾಗೆಯೇ, ನಾಗರಿಕರಾದ ನಾವು ಅನಾಗರಿಕರ ರೀತಿ ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಸೂಕ್ತವಾಗಿ ಕಸ ವಿಲೇವಾರಿ ಮಾಡಲು ಅವರಿಗೆ ಸಹಕರಿಸಬೇಕು.

-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು

ಆಂದೋಲನ ಡೆಸ್ಕ್

Recent Posts

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

1 min ago

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

17 mins ago

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು.…

42 mins ago

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

1 hour ago

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…

1 hour ago

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ದುರಂತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ ನೀಡಿದ ಸಿಎಂ ಪ್ರಮೋದ್‌ ಸಾವಂತ್‌

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…

1 hour ago