Andolana originals

ಓದುಗರ ಪತ್ರ: ಪೌರ ಕಾರ್ಮಿಕರನ್ನು ನಿಕೃಷ್ಟವಾಗಿ ಕಾಣದಿರಿ

ನಮ್ಮ ನಗರಗಳನ್ನು ಸ್ವಚ್ಛವಾಗಿಡಲು ಮಳೆ, ಚಳಿಯನ್ನು ಲೆಕ್ಕಿಸದೆ ಪ್ರತಿದಿನ ಬೆಳಿಗ್ಗೆ ಮನೆಹತ್ತಿರ ಬರುವ ಪೌರಕಾರ್ಮಿಕರನ್ನು ನಾವುಗಳು ಕಸದವರು ಎಂದು ಕರೆಯುತ್ತೇವೆ.! ಆದರೆ, ನಿಜವಾಗಿಯೂ ಕಸದವರು ಯಾರು? ಕಸವನ್ನು ರಸ್ತೆ ಮೇಲೆ, ಮೋರಿಯಲ್ಲಿ, ಎಲ್ಲೆಂದರಲ್ಲಿ ಎಸೆದು, ಸುತ್ತಮುತ್ತಲಿನ ಪರಿಸರವನ್ನು ಕೊಳಕು ಮಾಡುವ ನಾವುಗಳು ನಿಜವಾದ ಕಸದವರು.

ಆ ಕಸವನ್ನು ಎತ್ತಿ, ನಮ್ಮ ನಗರವನ್ನು ಸ್ವಚ್ಛವಾಗಿಸಿ, ಸುಂದರವಾಗಿಡಲು ತಮ್ಮ ಆರೋಗ್ಯವನ್ನೇ ಪಣಕ್ಕಿಟ್ಟು ದುಡಿಯುವವರು ಈ ಪೌರಕಾರ್ಮಿಕರು. ಹಾಗಾಗಿ, ಅವರನ್ನು ಕಸದವರು ಎಂದು ಕರೆಯುವುದು ಅವರುಗಳಿಗೆ ನಾವು ಮಾಡುವ ದೊಡ್ಡ ಅಪಮಾನ. ಬದಲಾಗಿ ನಾವು ಅವರನ್ನು ಸ್ವಚ್ಛತಾಗಾರರು ಎಂದು ಕರೆಯಬೇಕು. ಹಾಗೆಯೇ, ನಾಗರಿಕರಾದ ನಾವು ಅನಾಗರಿಕರ ರೀತಿ ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಸೂಕ್ತವಾಗಿ ಕಸ ವಿಲೇವಾರಿ ಮಾಡಲು ಅವರಿಗೆ ಸಹಕರಿಸಬೇಕು.

-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago