ಓದುಗರ ಪತ್ರ
ನಮ್ಮ ನಗರಗಳನ್ನು ಸ್ವಚ್ಛವಾಗಿಡಲು ಮಳೆ, ಚಳಿಯನ್ನು ಲೆಕ್ಕಿಸದೆ ಪ್ರತಿದಿನ ಬೆಳಿಗ್ಗೆ ಮನೆಹತ್ತಿರ ಬರುವ ಪೌರಕಾರ್ಮಿಕರನ್ನು ನಾವುಗಳು ಕಸದವರು ಎಂದು ಕರೆಯುತ್ತೇವೆ.! ಆದರೆ, ನಿಜವಾಗಿಯೂ ಕಸದವರು ಯಾರು? ಕಸವನ್ನು ರಸ್ತೆ ಮೇಲೆ, ಮೋರಿಯಲ್ಲಿ, ಎಲ್ಲೆಂದರಲ್ಲಿ ಎಸೆದು, ಸುತ್ತಮುತ್ತಲಿನ ಪರಿಸರವನ್ನು ಕೊಳಕು ಮಾಡುವ ನಾವುಗಳು ನಿಜವಾದ ಕಸದವರು.
ಆ ಕಸವನ್ನು ಎತ್ತಿ, ನಮ್ಮ ನಗರವನ್ನು ಸ್ವಚ್ಛವಾಗಿಸಿ, ಸುಂದರವಾಗಿಡಲು ತಮ್ಮ ಆರೋಗ್ಯವನ್ನೇ ಪಣಕ್ಕಿಟ್ಟು ದುಡಿಯುವವರು ಈ ಪೌರಕಾರ್ಮಿಕರು. ಹಾಗಾಗಿ, ಅವರನ್ನು ಕಸದವರು ಎಂದು ಕರೆಯುವುದು ಅವರುಗಳಿಗೆ ನಾವು ಮಾಡುವ ದೊಡ್ಡ ಅಪಮಾನ. ಬದಲಾಗಿ ನಾವು ಅವರನ್ನು ಸ್ವಚ್ಛತಾಗಾರರು ಎಂದು ಕರೆಯಬೇಕು. ಹಾಗೆಯೇ, ನಾಗರಿಕರಾದ ನಾವು ಅನಾಗರಿಕರ ರೀತಿ ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಸೂಕ್ತವಾಗಿ ಕಸ ವಿಲೇವಾರಿ ಮಾಡಲು ಅವರಿಗೆ ಸಹಕರಿಸಬೇಕು.
-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…
ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂʼಗೆ (ಟಿವಿಕೆ)…
ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…
ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…
ಬೆಂಗಳೂರು: ಡಾ.ರಾಜ್ಕುಮಾರ್ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್ ಅಹಿಂಸಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇತ್ತೀಚೆಗಷ್ಟೇ…