ಓದುಗರ ಪತ್ರ
ನಮ್ಮ ನಗರಗಳನ್ನು ಸ್ವಚ್ಛವಾಗಿಡಲು ಮಳೆ, ಚಳಿಯನ್ನು ಲೆಕ್ಕಿಸದೆ ಪ್ರತಿದಿನ ಬೆಳಿಗ್ಗೆ ಮನೆಹತ್ತಿರ ಬರುವ ಪೌರಕಾರ್ಮಿಕರನ್ನು ನಾವುಗಳು ಕಸದವರು ಎಂದು ಕರೆಯುತ್ತೇವೆ.! ಆದರೆ, ನಿಜವಾಗಿಯೂ ಕಸದವರು ಯಾರು? ಕಸವನ್ನು ರಸ್ತೆ ಮೇಲೆ, ಮೋರಿಯಲ್ಲಿ, ಎಲ್ಲೆಂದರಲ್ಲಿ ಎಸೆದು, ಸುತ್ತಮುತ್ತಲಿನ ಪರಿಸರವನ್ನು ಕೊಳಕು ಮಾಡುವ ನಾವುಗಳು ನಿಜವಾದ ಕಸದವರು.
ಆ ಕಸವನ್ನು ಎತ್ತಿ, ನಮ್ಮ ನಗರವನ್ನು ಸ್ವಚ್ಛವಾಗಿಸಿ, ಸುಂದರವಾಗಿಡಲು ತಮ್ಮ ಆರೋಗ್ಯವನ್ನೇ ಪಣಕ್ಕಿಟ್ಟು ದುಡಿಯುವವರು ಈ ಪೌರಕಾರ್ಮಿಕರು. ಹಾಗಾಗಿ, ಅವರನ್ನು ಕಸದವರು ಎಂದು ಕರೆಯುವುದು ಅವರುಗಳಿಗೆ ನಾವು ಮಾಡುವ ದೊಡ್ಡ ಅಪಮಾನ. ಬದಲಾಗಿ ನಾವು ಅವರನ್ನು ಸ್ವಚ್ಛತಾಗಾರರು ಎಂದು ಕರೆಯಬೇಕು. ಹಾಗೆಯೇ, ನಾಗರಿಕರಾದ ನಾವು ಅನಾಗರಿಕರ ರೀತಿ ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಸೂಕ್ತವಾಗಿ ಕಸ ವಿಲೇವಾರಿ ಮಾಡಲು ಅವರಿಗೆ ಸಹಕರಿಸಬೇಕು.
-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…