ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನೂ ಪ್ರಕಟಿಸಲಾಗುತ್ತದೆ. ಈ ಸಮಯದಲ್ಲಿ ಮಕ್ಕಳ ಮನಸ್ಸಿಗೆ ಬೇಸರವಾಗದೆ ಇರುವ ಹಾಗೆ ನೋಡಿಕೊಳ್ಳಬೇಕು. ಯಾವ ಶ್ರೇಣಿಯಲ್ಲಿ ಫಲಿತಾಂಶ ಬಂದರೂ ಅಥವಾ ಅನುತ್ತೀರ್ಣಗೊಂಡರೂ ಪೋಷಕರು ತಮ್ಮ ಮಕ್ಕಳೊಂದಿಗೆ ಬೇರೆ ಮಕ್ಕಳನ್ನು ಹೋಲಿಸಿ ನಿಂದಿಸುವುದು, ಅವರಿಗಾಗಿ ಖರ್ಚು ಮಾಡಿದ ಪಟ್ಟಿಯನ್ನು ಹೇಳಿ ಹಂಗಿಸುವುದನ್ನು ಮಾಡಬಾರದು.
ಪೋಷಕರ ಟೀಕೆಗಳಿಂದ ಮಕ್ಕಳು ಮನೆ ಬಿಟ್ಟು ಹೋಗಬಹುದು ಅಥವಾ ಮನನೊಂದು ಆತ್ಮಹತ್ಯೆಗೂ ಯತ್ನಿಸಬಹುದು. ಎಲ್ಲ ಮಕ್ಕಳ ಬುದ್ಧಿಮಟ್ಟ ಒಂದೇ ತರಹ ಇರುವುದಿಲ್ಲ. ಬದುಕುವುದಕ್ಕೆ ಹಲವಾರು ಮಾರ್ಗಗಳಿವೆ. -ಲಿತಾಂಶ ಏನೇ ಆದರೂ ಮಕ್ಕಳನ್ನು ಪ್ರೋತ್ಸಾಹಿಸಿದರೆ ಮುಂದಿನ ತರಗತಿಯಲ್ಲಿ ಓದುವ ಆಸಕ್ತಿಯನ್ನು ಬೆಳೆಸಿಕೊಳ್ಳುತ್ತಾರೆ. ತಂದೆ ತಾಯಿಯ ಬಗ್ಗೆ ಗೌರವ ಹೆಚ್ಚಾಗುತ್ತದೆ. ತಮ್ಮ ಮಕ್ಕಳನ್ನು ಪ್ರೀತಿಸುವುದರೊಂದಿಗೆ ಅವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದೂ ಪೋಷಕರ ಕರ್ತವ್ಯ
-ಎಂ. ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…