Andolana originals

ಓದುಗರ ಪತ್ರ: ಸಫಾರಿ ಮರು ಆರಂಭ ಬೇಡ

ಮೈಸೂರು ವಿಭಾಗದಲ್ಲಿ ಹುಲಿ ಚಿರತೆಗಳ ದಾಳಿಯಿಂದಾಗಿ ಹಲವಾರು ಮಂದಿ ಸಾವನ್ನಪ್ಪಿದ್ದರು. ಮಾನವ-ಪ್ರಾಣಿ ಸಂಘರ್ಷವನ್ನು ತಪ್ಪಿಸುವಂತೆ ರೈತ ಸಂಘ ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಇದೀಗ ಮುಖ್ಯಮಂತ್ರಿಗಳು ಸಫಾರಿಯನ್ನು ಪುನರಾರಂಭಿಸುವ ಕುರಿತು ತಜ್ಞರಿಂದ ವರದಿ ಪಡೆಯುವಂತೆ ಅರಣ್ಯ ಸಚಿವರಿಗೆ ಸೂಚನೆ ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಸಫಾರಿ ನಿಲ್ಲಿಸಿರುವುದರಿಂದ ಪ್ರಾಣಿಗಳ ಉಪಟಳ ಕಡಿಮೆಯಾಗಿದೆಯೇ, ಇಲ್ಲವೇ ಎನ್ನುವುದನ್ನು ತಿಳಿಯಲು ಒಂದೆರಡು ವರ್ಷಗಳಾದರೂ ಬೇಕು. ಸಫಾರಿ ನಿಲ್ಲಿಸಿರುವುದು ಸರ್ಕಾರ, ಹೋಟೆಲ್, ರೆಸಾರ್ಟ್‌ಗಳಿಗೆ ನಷ್ಟ ವಾಗಿದೆ. ಸಫಾರಿ ಗುತ್ತಿಗೆ ನೌಕರರಿಗೆ ವೇತನ ಕಡಿತಗೊಂಡಿದೆ ಎನ್ನುವುದು ಸಮಂಜಸ ಕಾರಣವಲ್ಲ. ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಸಫಾರಿ ನಡೆಸಿ ವನ್ಯ ಜೀವಿಗಳಿಗೆ ಉಪಟಳ ನೀಡುವುದು ಸರಿಯಲ್ಲ.

ಸಫಾರಿ ನಿಲ್ಲಿಸಿರುವುದರಿಂದ ಕೆಲಸ ಕಳೆದುಕೊಂಡಿರುವವರಿಗೆ ಅವರ ಅರ್ಹತೆಗನುಗುಣವಾಗಿ ಬೇರೆ ಕೆಲಸಕ್ಕೆ ನಿಯೋಜಿಸಬೇಕು. ಕಾಡಂಚಿನಲ್ಲಿರುವ ರೆಸಾರ್ಟ್‌ಗಳನ್ನು ಬಂದ್ ಮಾಡಬೇಕು. ಪ್ರಾಣಿಗಳನ್ನು ನೋಡಲೇ ಬೇಕು ಎನ್ನುವವರು ನಗರಗಳಲ್ಲಿರುವ ಪ್ರಾಣಿ ಸಂಗ್ರಹಾಲಯಗಳಿಗೆ ಹೋಗಲಿ. ಸರ್ಕಾರ ಸಫಾರಿಗೆ ಮತ್ತೆ ಅನುಮತಿ ನೀಡುವುದು ಬೇಡ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

7 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

7 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

8 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

9 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

9 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

10 hours ago