Andolana originals

ಓದುಗರ ಪತ್ರ: ಸಫಾರಿ ಮರು ಆರಂಭ ಬೇಡ

ಮೈಸೂರು ವಿಭಾಗದಲ್ಲಿ ಹುಲಿ ಚಿರತೆಗಳ ದಾಳಿಯಿಂದಾಗಿ ಹಲವಾರು ಮಂದಿ ಸಾವನ್ನಪ್ಪಿದ್ದರು. ಮಾನವ-ಪ್ರಾಣಿ ಸಂಘರ್ಷವನ್ನು ತಪ್ಪಿಸುವಂತೆ ರೈತ ಸಂಘ ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಇದೀಗ ಮುಖ್ಯಮಂತ್ರಿಗಳು ಸಫಾರಿಯನ್ನು ಪುನರಾರಂಭಿಸುವ ಕುರಿತು ತಜ್ಞರಿಂದ ವರದಿ ಪಡೆಯುವಂತೆ ಅರಣ್ಯ ಸಚಿವರಿಗೆ ಸೂಚನೆ ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಸಫಾರಿ ನಿಲ್ಲಿಸಿರುವುದರಿಂದ ಪ್ರಾಣಿಗಳ ಉಪಟಳ ಕಡಿಮೆಯಾಗಿದೆಯೇ, ಇಲ್ಲವೇ ಎನ್ನುವುದನ್ನು ತಿಳಿಯಲು ಒಂದೆರಡು ವರ್ಷಗಳಾದರೂ ಬೇಕು. ಸಫಾರಿ ನಿಲ್ಲಿಸಿರುವುದು ಸರ್ಕಾರ, ಹೋಟೆಲ್, ರೆಸಾರ್ಟ್‌ಗಳಿಗೆ ನಷ್ಟ ವಾಗಿದೆ. ಸಫಾರಿ ಗುತ್ತಿಗೆ ನೌಕರರಿಗೆ ವೇತನ ಕಡಿತಗೊಂಡಿದೆ ಎನ್ನುವುದು ಸಮಂಜಸ ಕಾರಣವಲ್ಲ. ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಸಫಾರಿ ನಡೆಸಿ ವನ್ಯ ಜೀವಿಗಳಿಗೆ ಉಪಟಳ ನೀಡುವುದು ಸರಿಯಲ್ಲ.

ಸಫಾರಿ ನಿಲ್ಲಿಸಿರುವುದರಿಂದ ಕೆಲಸ ಕಳೆದುಕೊಂಡಿರುವವರಿಗೆ ಅವರ ಅರ್ಹತೆಗನುಗುಣವಾಗಿ ಬೇರೆ ಕೆಲಸಕ್ಕೆ ನಿಯೋಜಿಸಬೇಕು. ಕಾಡಂಚಿನಲ್ಲಿರುವ ರೆಸಾರ್ಟ್‌ಗಳನ್ನು ಬಂದ್ ಮಾಡಬೇಕು. ಪ್ರಾಣಿಗಳನ್ನು ನೋಡಲೇ ಬೇಕು ಎನ್ನುವವರು ನಗರಗಳಲ್ಲಿರುವ ಪ್ರಾಣಿ ಸಂಗ್ರಹಾಲಯಗಳಿಗೆ ಹೋಗಲಿ. ಸರ್ಕಾರ ಸಫಾರಿಗೆ ಮತ್ತೆ ಅನುಮತಿ ನೀಡುವುದು ಬೇಡ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

1 hour ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

1 hour ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

1 hour ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

1 hour ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

2 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

2 hours ago