Andolana originals

ಓದುಗರ ಪತ್ರ: ಮಕ್ಕಳ ಭವಿಷ್ಯ ಚಿವುಟಬೇಡಿ

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಕ್ಕಳು ಖಾಸಗಿ ಶಾಲೆಯಲ್ಲಿ ಓದುವಂತಾಗಬೇಕು ಎಂಬ ಉದ್ದೇಶದಿಂದ ಜಾರಿಗೆ ತಂದ ಶಿಕ್ಷಣ ಹಕ್ಕು ಕಾಯಿದೆ (ಆರ್‌ಟಿಇ) ಈಗ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ರಾಜ್ಯದ ೩೫ ಶೈಕ್ಷಣಿಕ ಜಿಲ್ಲೆಗಳ ಅನುದಾನಿತ ಶಾಲೆಗಳಲ್ಲಿ ೧೧,೪೫೪  ಸೀಟುಗಳನ್ನು ಆರ್‌ಟಿಇ ಅಡಿ ಪ್ರವೇಶಕ್ಕೆ ಮೀಸಲಿಡಲಾಗಿದೆ. ಆದರೆ ೨,೪೯೯ ಸೀಟುಗಳು ಮಾತ್ರ ಭರ್ತಿಯಾಗಿವೆ.

ಇದರಲ್ಲಿ ತುಮಕೂರಿನ ಮಧುಗಿರಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಆರ್‌ಟಿಇ ಅಡಿ ಒಂದೇ ಒಂದು ಸೀಟೂ ಭರ್ತಿಯಾಗಿಲ್ಲ. ಖಾಸಗಿ ಶಾಲೆಗಳಲ್ಲಿ ಶೇ.೨೫ರಷ್ಟು ಪ್ರವೇಶವನ್ನು ಬಡ ಮಕ್ಕಳಿಗಾಗಿ ಮೀಸಲಿಟ್ಟು, ಮಕ್ಕಳ ಶೈಕ್ಷಣಿಕ ಮಟ್ಟ ಸುಧಾರಿಸುವ ಗುರಿಯನ್ನು ಸರ್ಕಾರ ಹೊಂದಿತ್ತು. ಆದರೆ ಈಗ ಖಾಸಗಿ ಶಾಲೆಗಳ ಆಡಳಿತ ಮಂಡಳಿಯು ಈ ಯೋಜನೆಯನ್ನು ಅನುದಾನಿತ ಶಾಲೆಗಳಿಗೆ ಸೀಮಿತಗೊಳಿಸಿದ್ದರಿಂದ, ಆರ್‌ಟಿಇ ಬಗ್ಗೆ ಪೋಷಕರು ನಿರಾಸಕ್ತಿ ತೋರುತ್ತಿದ್ದಾರೆ.

ಇದಕ್ಕೆ ಸರ್ಕಾರ ಯಾವುದೇ ಕ್ರಮ ಅಥವಾ ನಿರ್ಧಾರ ತೆಗೆದುಕೊಳ್ಳದೆ ಇದ್ದರೆ ಬಡ ಮಕ್ಕಳ ಭವಿಷ್ಯದ ಗತಿ ಏನಾಗಬೇಕು? ಇನ್ನು ಶಿಕ್ಷಕ, ಶಿಕ್ಷಕಿಯರ ಕೊರತೆಯಿಂದ ಎಷ್ಟೋ ವಿದ್ಯಾರ್ಥಿಗಳು ಶಾಲೆ ತೊರೆಯಲು ಮುಂದಾಗಿದ್ದಾರೆ. ಸರ್ಕಾರ ಕೂಡಲೇ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸರ್ಕಾರಿ ಶಾಲೆಗಳನ್ನು ಸುಧಾರಣೆ ಮಾಡಬೇಕಿದೆ.

– ಎನ್.ಆಶಾ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

50 mins ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

1 hour ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

1 hour ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

1 hour ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

2 hours ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

2 hours ago