Andolana originals

ಓದುಗರ ಪತ್ರ: ಮಕ್ಕಳ ಭವಿಷ್ಯ ಚಿವುಟಬೇಡಿ

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಕ್ಕಳು ಖಾಸಗಿ ಶಾಲೆಯಲ್ಲಿ ಓದುವಂತಾಗಬೇಕು ಎಂಬ ಉದ್ದೇಶದಿಂದ ಜಾರಿಗೆ ತಂದ ಶಿಕ್ಷಣ ಹಕ್ಕು ಕಾಯಿದೆ (ಆರ್‌ಟಿಇ) ಈಗ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ರಾಜ್ಯದ ೩೫ ಶೈಕ್ಷಣಿಕ ಜಿಲ್ಲೆಗಳ ಅನುದಾನಿತ ಶಾಲೆಗಳಲ್ಲಿ ೧೧,೪೫೪  ಸೀಟುಗಳನ್ನು ಆರ್‌ಟಿಇ ಅಡಿ ಪ್ರವೇಶಕ್ಕೆ ಮೀಸಲಿಡಲಾಗಿದೆ. ಆದರೆ ೨,೪೯೯ ಸೀಟುಗಳು ಮಾತ್ರ ಭರ್ತಿಯಾಗಿವೆ.

ಇದರಲ್ಲಿ ತುಮಕೂರಿನ ಮಧುಗಿರಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಆರ್‌ಟಿಇ ಅಡಿ ಒಂದೇ ಒಂದು ಸೀಟೂ ಭರ್ತಿಯಾಗಿಲ್ಲ. ಖಾಸಗಿ ಶಾಲೆಗಳಲ್ಲಿ ಶೇ.೨೫ರಷ್ಟು ಪ್ರವೇಶವನ್ನು ಬಡ ಮಕ್ಕಳಿಗಾಗಿ ಮೀಸಲಿಟ್ಟು, ಮಕ್ಕಳ ಶೈಕ್ಷಣಿಕ ಮಟ್ಟ ಸುಧಾರಿಸುವ ಗುರಿಯನ್ನು ಸರ್ಕಾರ ಹೊಂದಿತ್ತು. ಆದರೆ ಈಗ ಖಾಸಗಿ ಶಾಲೆಗಳ ಆಡಳಿತ ಮಂಡಳಿಯು ಈ ಯೋಜನೆಯನ್ನು ಅನುದಾನಿತ ಶಾಲೆಗಳಿಗೆ ಸೀಮಿತಗೊಳಿಸಿದ್ದರಿಂದ, ಆರ್‌ಟಿಇ ಬಗ್ಗೆ ಪೋಷಕರು ನಿರಾಸಕ್ತಿ ತೋರುತ್ತಿದ್ದಾರೆ.

ಇದಕ್ಕೆ ಸರ್ಕಾರ ಯಾವುದೇ ಕ್ರಮ ಅಥವಾ ನಿರ್ಧಾರ ತೆಗೆದುಕೊಳ್ಳದೆ ಇದ್ದರೆ ಬಡ ಮಕ್ಕಳ ಭವಿಷ್ಯದ ಗತಿ ಏನಾಗಬೇಕು? ಇನ್ನು ಶಿಕ್ಷಕ, ಶಿಕ್ಷಕಿಯರ ಕೊರತೆಯಿಂದ ಎಷ್ಟೋ ವಿದ್ಯಾರ್ಥಿಗಳು ಶಾಲೆ ತೊರೆಯಲು ಮುಂದಾಗಿದ್ದಾರೆ. ಸರ್ಕಾರ ಕೂಡಲೇ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸರ್ಕಾರಿ ಶಾಲೆಗಳನ್ನು ಸುಧಾರಣೆ ಮಾಡಬೇಕಿದೆ.

– ಎನ್.ಆಶಾ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

3 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

6 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

6 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago