ಓದುಗರ ಪತ್ರ
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಕ್ಕಳು ಖಾಸಗಿ ಶಾಲೆಯಲ್ಲಿ ಓದುವಂತಾಗಬೇಕು ಎಂಬ ಉದ್ದೇಶದಿಂದ ಜಾರಿಗೆ ತಂದ ಶಿಕ್ಷಣ ಹಕ್ಕು ಕಾಯಿದೆ (ಆರ್ಟಿಇ) ಈಗ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ರಾಜ್ಯದ ೩೫ ಶೈಕ್ಷಣಿಕ ಜಿಲ್ಲೆಗಳ ಅನುದಾನಿತ ಶಾಲೆಗಳಲ್ಲಿ ೧೧,೪೫೪ ಸೀಟುಗಳನ್ನು ಆರ್ಟಿಇ ಅಡಿ ಪ್ರವೇಶಕ್ಕೆ ಮೀಸಲಿಡಲಾಗಿದೆ. ಆದರೆ ೨,೪೯೯ ಸೀಟುಗಳು ಮಾತ್ರ ಭರ್ತಿಯಾಗಿವೆ.
ಇದರಲ್ಲಿ ತುಮಕೂರಿನ ಮಧುಗಿರಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಆರ್ಟಿಇ ಅಡಿ ಒಂದೇ ಒಂದು ಸೀಟೂ ಭರ್ತಿಯಾಗಿಲ್ಲ. ಖಾಸಗಿ ಶಾಲೆಗಳಲ್ಲಿ ಶೇ.೨೫ರಷ್ಟು ಪ್ರವೇಶವನ್ನು ಬಡ ಮಕ್ಕಳಿಗಾಗಿ ಮೀಸಲಿಟ್ಟು, ಮಕ್ಕಳ ಶೈಕ್ಷಣಿಕ ಮಟ್ಟ ಸುಧಾರಿಸುವ ಗುರಿಯನ್ನು ಸರ್ಕಾರ ಹೊಂದಿತ್ತು. ಆದರೆ ಈಗ ಖಾಸಗಿ ಶಾಲೆಗಳ ಆಡಳಿತ ಮಂಡಳಿಯು ಈ ಯೋಜನೆಯನ್ನು ಅನುದಾನಿತ ಶಾಲೆಗಳಿಗೆ ಸೀಮಿತಗೊಳಿಸಿದ್ದರಿಂದ, ಆರ್ಟಿಇ ಬಗ್ಗೆ ಪೋಷಕರು ನಿರಾಸಕ್ತಿ ತೋರುತ್ತಿದ್ದಾರೆ.
ಇದಕ್ಕೆ ಸರ್ಕಾರ ಯಾವುದೇ ಕ್ರಮ ಅಥವಾ ನಿರ್ಧಾರ ತೆಗೆದುಕೊಳ್ಳದೆ ಇದ್ದರೆ ಬಡ ಮಕ್ಕಳ ಭವಿಷ್ಯದ ಗತಿ ಏನಾಗಬೇಕು? ಇನ್ನು ಶಿಕ್ಷಕ, ಶಿಕ್ಷಕಿಯರ ಕೊರತೆಯಿಂದ ಎಷ್ಟೋ ವಿದ್ಯಾರ್ಥಿಗಳು ಶಾಲೆ ತೊರೆಯಲು ಮುಂದಾಗಿದ್ದಾರೆ. ಸರ್ಕಾರ ಕೂಡಲೇ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸರ್ಕಾರಿ ಶಾಲೆಗಳನ್ನು ಸುಧಾರಣೆ ಮಾಡಬೇಕಿದೆ.
– ಎನ್.ಆಶಾ, ಬೆಂಗಳೂರು
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…