ಓದುಗರ ಪತ್ರ
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಕ್ಕಳು ಖಾಸಗಿ ಶಾಲೆಯಲ್ಲಿ ಓದುವಂತಾಗಬೇಕು ಎಂಬ ಉದ್ದೇಶದಿಂದ ಜಾರಿಗೆ ತಂದ ಶಿಕ್ಷಣ ಹಕ್ಕು ಕಾಯಿದೆ (ಆರ್ಟಿಇ) ಈಗ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ರಾಜ್ಯದ ೩೫ ಶೈಕ್ಷಣಿಕ ಜಿಲ್ಲೆಗಳ ಅನುದಾನಿತ ಶಾಲೆಗಳಲ್ಲಿ ೧೧,೪೫೪ ಸೀಟುಗಳನ್ನು ಆರ್ಟಿಇ ಅಡಿ ಪ್ರವೇಶಕ್ಕೆ ಮೀಸಲಿಡಲಾಗಿದೆ. ಆದರೆ ೨,೪೯೯ ಸೀಟುಗಳು ಮಾತ್ರ ಭರ್ತಿಯಾಗಿವೆ.
ಇದರಲ್ಲಿ ತುಮಕೂರಿನ ಮಧುಗಿರಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಆರ್ಟಿಇ ಅಡಿ ಒಂದೇ ಒಂದು ಸೀಟೂ ಭರ್ತಿಯಾಗಿಲ್ಲ. ಖಾಸಗಿ ಶಾಲೆಗಳಲ್ಲಿ ಶೇ.೨೫ರಷ್ಟು ಪ್ರವೇಶವನ್ನು ಬಡ ಮಕ್ಕಳಿಗಾಗಿ ಮೀಸಲಿಟ್ಟು, ಮಕ್ಕಳ ಶೈಕ್ಷಣಿಕ ಮಟ್ಟ ಸುಧಾರಿಸುವ ಗುರಿಯನ್ನು ಸರ್ಕಾರ ಹೊಂದಿತ್ತು. ಆದರೆ ಈಗ ಖಾಸಗಿ ಶಾಲೆಗಳ ಆಡಳಿತ ಮಂಡಳಿಯು ಈ ಯೋಜನೆಯನ್ನು ಅನುದಾನಿತ ಶಾಲೆಗಳಿಗೆ ಸೀಮಿತಗೊಳಿಸಿದ್ದರಿಂದ, ಆರ್ಟಿಇ ಬಗ್ಗೆ ಪೋಷಕರು ನಿರಾಸಕ್ತಿ ತೋರುತ್ತಿದ್ದಾರೆ.
ಇದಕ್ಕೆ ಸರ್ಕಾರ ಯಾವುದೇ ಕ್ರಮ ಅಥವಾ ನಿರ್ಧಾರ ತೆಗೆದುಕೊಳ್ಳದೆ ಇದ್ದರೆ ಬಡ ಮಕ್ಕಳ ಭವಿಷ್ಯದ ಗತಿ ಏನಾಗಬೇಕು? ಇನ್ನು ಶಿಕ್ಷಕ, ಶಿಕ್ಷಕಿಯರ ಕೊರತೆಯಿಂದ ಎಷ್ಟೋ ವಿದ್ಯಾರ್ಥಿಗಳು ಶಾಲೆ ತೊರೆಯಲು ಮುಂದಾಗಿದ್ದಾರೆ. ಸರ್ಕಾರ ಕೂಡಲೇ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸರ್ಕಾರಿ ಶಾಲೆಗಳನ್ನು ಸುಧಾರಣೆ ಮಾಡಬೇಕಿದೆ.
– ಎನ್.ಆಶಾ, ಬೆಂಗಳೂರು
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…