ಓದುಗರ ಪತ್ರ
ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದ್ದು, ಪೋಷಕರಿಗೆ ನಮ್ಮ ಮಕ್ಕಳಿಗೆ ಸುರಕ್ಷಿತವಾದ ಜಾಗ ಯಾವುದು ಎಂದು ಚಿಂತೆ ಕಾಡುತ್ತಿದೆ. ಮಕ್ಕಳ ಮೇಲೆ ಅತ್ಯಾಚಾರವಾ ದಾಗ ಮಕ್ಕಳು ಗಾಬರಿಗೊಂಡಿರುತ್ತಾರೆ. ಮನಸ್ಸಿಗೆ ತುಂಬಾ ಘಾಸಿಯಾಗಿರುತ್ತದೆ.
ಇಂತಹ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು, ಪೊಲೀಸರು, ವಕೀಲರು ಹಾಗೂ ವೈದ್ಯರು ನೂರಾರು ಪ್ರಶ್ನೆಗಳನ್ನು ಕೇಳುವುದು ಸಮಂಜಸವಲ್ಲ. ಎಲ್ಲರೂ ಮುಗಿಬಿದ್ದರೆ ಸಂತ್ರಸ್ತೆ ನೀಡುವ ಹೇಳಿಕೆಗಳು ಬದಲಾಗಬಹುದು, ಆ ಹೇಳಿಕೆ ತಪ್ಪಿಗೂ ಕಾರಣವಾಗಬಹುದು. ಸಂತ್ರಸ್ತೆ ಕೋರ್ಟಿನ ಕಟಕಟೆಯಲ್ಲಿ ಸಂತ್ರಸ್ತೆಯನ್ನು ನಿಲ್ಲಿಸಿ ಪದೇ ಪದೇ ಪ್ರಶ್ನೆ ಕೇಳುವ ಮೂಲಕ ಗಾಬರಿಗೊಳಿಸುವುದು ಬೇಡ. ಸಂತ್ರಸ್ತೆಗೆ ಕೇಳಲಾದ ಪ್ರಶ್ನೆ ಹಾಗೂ ಆಕೆ ನೀಡುವ ಉತ್ತರಗಳನ್ನು ಧ್ವನಿ ಮುದ್ರಿಸಿಕೊಂಡು ಸಂಬಂಧಪಟ್ಟವರಿಗೆ ಕಳುಹಿಸಿದರೆ ಸಂತ್ರಸ್ತೆಯನ್ನು ಪದೇ ಪದೇ ಪ್ರಶ್ನೆ ಕೇಳುವುದು ತಪ್ಪಿದಂತಾಗುತ್ತದೆ. ಹೇಳಿಕೆಗಳೂ ಒಂದೇ ತೆರ ನಾಗಿರುತ್ತವೆ.
-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…