ಓದುಗರ ಪತ್ರ
ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದ್ದು, ಪೋಷಕರಿಗೆ ನಮ್ಮ ಮಕ್ಕಳಿಗೆ ಸುರಕ್ಷಿತವಾದ ಜಾಗ ಯಾವುದು ಎಂದು ಚಿಂತೆ ಕಾಡುತ್ತಿದೆ. ಮಕ್ಕಳ ಮೇಲೆ ಅತ್ಯಾಚಾರವಾ ದಾಗ ಮಕ್ಕಳು ಗಾಬರಿಗೊಂಡಿರುತ್ತಾರೆ. ಮನಸ್ಸಿಗೆ ತುಂಬಾ ಘಾಸಿಯಾಗಿರುತ್ತದೆ.
ಇಂತಹ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು, ಪೊಲೀಸರು, ವಕೀಲರು ಹಾಗೂ ವೈದ್ಯರು ನೂರಾರು ಪ್ರಶ್ನೆಗಳನ್ನು ಕೇಳುವುದು ಸಮಂಜಸವಲ್ಲ. ಎಲ್ಲರೂ ಮುಗಿಬಿದ್ದರೆ ಸಂತ್ರಸ್ತೆ ನೀಡುವ ಹೇಳಿಕೆಗಳು ಬದಲಾಗಬಹುದು, ಆ ಹೇಳಿಕೆ ತಪ್ಪಿಗೂ ಕಾರಣವಾಗಬಹುದು. ಸಂತ್ರಸ್ತೆ ಕೋರ್ಟಿನ ಕಟಕಟೆಯಲ್ಲಿ ಸಂತ್ರಸ್ತೆಯನ್ನು ನಿಲ್ಲಿಸಿ ಪದೇ ಪದೇ ಪ್ರಶ್ನೆ ಕೇಳುವ ಮೂಲಕ ಗಾಬರಿಗೊಳಿಸುವುದು ಬೇಡ. ಸಂತ್ರಸ್ತೆಗೆ ಕೇಳಲಾದ ಪ್ರಶ್ನೆ ಹಾಗೂ ಆಕೆ ನೀಡುವ ಉತ್ತರಗಳನ್ನು ಧ್ವನಿ ಮುದ್ರಿಸಿಕೊಂಡು ಸಂಬಂಧಪಟ್ಟವರಿಗೆ ಕಳುಹಿಸಿದರೆ ಸಂತ್ರಸ್ತೆಯನ್ನು ಪದೇ ಪದೇ ಪ್ರಶ್ನೆ ಕೇಳುವುದು ತಪ್ಪಿದಂತಾಗುತ್ತದೆ. ಹೇಳಿಕೆಗಳೂ ಒಂದೇ ತೆರ ನಾಗಿರುತ್ತವೆ.
-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…