ಓದುಗರ ಪತ್ರ
ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದ್ದು, ಪೋಷಕರಿಗೆ ನಮ್ಮ ಮಕ್ಕಳಿಗೆ ಸುರಕ್ಷಿತವಾದ ಜಾಗ ಯಾವುದು ಎಂದು ಚಿಂತೆ ಕಾಡುತ್ತಿದೆ. ಮಕ್ಕಳ ಮೇಲೆ ಅತ್ಯಾಚಾರವಾ ದಾಗ ಮಕ್ಕಳು ಗಾಬರಿಗೊಂಡಿರುತ್ತಾರೆ. ಮನಸ್ಸಿಗೆ ತುಂಬಾ ಘಾಸಿಯಾಗಿರುತ್ತದೆ.
ಇಂತಹ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು, ಪೊಲೀಸರು, ವಕೀಲರು ಹಾಗೂ ವೈದ್ಯರು ನೂರಾರು ಪ್ರಶ್ನೆಗಳನ್ನು ಕೇಳುವುದು ಸಮಂಜಸವಲ್ಲ. ಎಲ್ಲರೂ ಮುಗಿಬಿದ್ದರೆ ಸಂತ್ರಸ್ತೆ ನೀಡುವ ಹೇಳಿಕೆಗಳು ಬದಲಾಗಬಹುದು, ಆ ಹೇಳಿಕೆ ತಪ್ಪಿಗೂ ಕಾರಣವಾಗಬಹುದು. ಸಂತ್ರಸ್ತೆ ಕೋರ್ಟಿನ ಕಟಕಟೆಯಲ್ಲಿ ಸಂತ್ರಸ್ತೆಯನ್ನು ನಿಲ್ಲಿಸಿ ಪದೇ ಪದೇ ಪ್ರಶ್ನೆ ಕೇಳುವ ಮೂಲಕ ಗಾಬರಿಗೊಳಿಸುವುದು ಬೇಡ. ಸಂತ್ರಸ್ತೆಗೆ ಕೇಳಲಾದ ಪ್ರಶ್ನೆ ಹಾಗೂ ಆಕೆ ನೀಡುವ ಉತ್ತರಗಳನ್ನು ಧ್ವನಿ ಮುದ್ರಿಸಿಕೊಂಡು ಸಂಬಂಧಪಟ್ಟವರಿಗೆ ಕಳುಹಿಸಿದರೆ ಸಂತ್ರಸ್ತೆಯನ್ನು ಪದೇ ಪದೇ ಪ್ರಶ್ನೆ ಕೇಳುವುದು ತಪ್ಪಿದಂತಾಗುತ್ತದೆ. ಹೇಳಿಕೆಗಳೂ ಒಂದೇ ತೆರ ನಾಗಿರುತ್ತವೆ.
-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…