Andolana originals

ಓದುಗರ ಪತ್ರ: ಸರ್ಕಾರಿ ಶಾಲೆಗಳ ಬಗ್ಗೆ ಅನಾದರ ಬೇಡ

ಸರ್ಕಾರಿ ಶಾಲೆಗಳು ಅದರಲ್ಲೂ ಸರ್ಕಾರಿ ವಸತಿ ಶಾಲೆಗಳೆಂದರೆ ಮೂಗುಮುರಿಯುವವರೇ ಹೆಚ್ಚು. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಬಗ್ಗೆಯೂ ಸಾಮಾನ್ಯವಾಗಿ ಇಂತಹದೇ ಅಭಿಪ್ರಾಯಗಳು ಜನರ ಮನದಲ್ಲಿವೆ. ಇಂತಹ ಶಾಲೆಗಳಲ್ಲಿ ಮೂಲ ಸೌಕರ್ಯಗಳು ಸರಿಯಾಗಿ ಇರುವುದಿಲ್ಲ. ಕೊಠಡಿಗಳು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಇರುವುದಿಲ್ಲ. ಊಟದ ಗುಣ ಮಟ್ಟವೂ ಅಷ್ಟಕ್ಕಷ್ಟೆ ಎಂಬಂತಹ ನಿರ್ಲಕ್ಷ್ಯ ಇರುತ್ತದೆ.

ಇಂತಹ ಉಡಾಫೆಗಳಿಗೆ ಎದಿರೇಟು ನೀಡುವಂತೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ವಜ್ಜರಮಟ್ಟಿಯ ಅಂಕಿತಾ ಬಸಪ್ಪ ಕೊಣ್ಣೂರ ಅವರು ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಕ್ಕೇ ಮೊದಲಿಗರಾಗಿ ಹೊರಹೊಮ್ಮಿದ್ದಾರೆ. ಅವರು ಬಾಗಲಕೋಟೆ ಜಿಲ್ಲೆ ಹಿಪ್ಪರಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಎಂಬುದು ಗಮನಾರ್ಹ.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಪುಸ್ತಕ, ಸಮವಸ್ತ್ರ ಊಟ ವಸತಿ ಎಲ್ಲವೂ ಉಚಿತವಾಗಿ ಸಿಗುತ್ತವೆ. ಕೆಲವು ಕಡೆ ಹಾಸ್ಟೆಲ್‌ಗೆ ಸ್ವಂತ ಕಟ್ಟಡ ಇರದಿದ್ದರೂ, ಅಲ್ಲಿನ ಶಿಕ್ಷಕರು ಶ್ರಮ ವಹಿಸಿ ಮಕ್ಕಳಿಗೆ ಬೋಧನೆ ಮಾಡುತ್ತಾರೆ. ಅವರ ನಿರಂತರ ಶ್ರಮದಿಂದ ಪ್ರತಿ ವರ್ಷವೂ ರಾಜ್ಯದಲ್ಲಿರುವ ಬಹುತೇಕ ಎಲ್ಲ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳೂ ಒಳ್ಳೆಯ ಫಲಿತಾಂಶ ನೀಡುತ್ತ ಬಂದಿವೆ. ಸರ್ಕಾರಿ ಶಾಲೆಯ ಶಿಕ್ಷಣ ಬೇಡ ಎನ್ನುವ ಕಾಮಾಲೆ ಕಣ್ಣಿನವರು ಅಂಕಿತಾರ ಸಾಧನೆಯನ್ನು ಗಮನಿಸಬೇಕು. ಇನ್ನಾದರೂ ಸರ್ಕಾರಿ ಶಾಲೆಗಳ ಬಗ್ಗೆ ಅದರಲ್ಲಿಯೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಬಗ್ಗೆ ಹೊಂದಿರುವ ನಕಾರಾತ್ಮಕ ಧೋರಣೆ ಗಳಿಂದ ಹೊರಬಂದರೆ, ಸರ್ಕಾರಿ ಶಾಲೆಗಳಿಗೆ ಬೇಡಿಕೆ ಹೆಚ್ಚುತ್ತದೆ.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

12 hours ago