Andolana originals

ಓದುಗರ ಪತ್ರ: ಸರ್ಕಾರಿ ಶಾಲೆಗಳ ಬಗ್ಗೆ ಅನಾದರ ಬೇಡ

ಸರ್ಕಾರಿ ಶಾಲೆಗಳು ಅದರಲ್ಲೂ ಸರ್ಕಾರಿ ವಸತಿ ಶಾಲೆಗಳೆಂದರೆ ಮೂಗುಮುರಿಯುವವರೇ ಹೆಚ್ಚು. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಬಗ್ಗೆಯೂ ಸಾಮಾನ್ಯವಾಗಿ ಇಂತಹದೇ ಅಭಿಪ್ರಾಯಗಳು ಜನರ ಮನದಲ್ಲಿವೆ. ಇಂತಹ ಶಾಲೆಗಳಲ್ಲಿ ಮೂಲ ಸೌಕರ್ಯಗಳು ಸರಿಯಾಗಿ ಇರುವುದಿಲ್ಲ. ಕೊಠಡಿಗಳು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಇರುವುದಿಲ್ಲ. ಊಟದ ಗುಣ ಮಟ್ಟವೂ ಅಷ್ಟಕ್ಕಷ್ಟೆ ಎಂಬಂತಹ ನಿರ್ಲಕ್ಷ್ಯ ಇರುತ್ತದೆ.

ಇಂತಹ ಉಡಾಫೆಗಳಿಗೆ ಎದಿರೇಟು ನೀಡುವಂತೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ವಜ್ಜರಮಟ್ಟಿಯ ಅಂಕಿತಾ ಬಸಪ್ಪ ಕೊಣ್ಣೂರ ಅವರು ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಕ್ಕೇ ಮೊದಲಿಗರಾಗಿ ಹೊರಹೊಮ್ಮಿದ್ದಾರೆ. ಅವರು ಬಾಗಲಕೋಟೆ ಜಿಲ್ಲೆ ಹಿಪ್ಪರಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಎಂಬುದು ಗಮನಾರ್ಹ.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಪುಸ್ತಕ, ಸಮವಸ್ತ್ರ ಊಟ ವಸತಿ ಎಲ್ಲವೂ ಉಚಿತವಾಗಿ ಸಿಗುತ್ತವೆ. ಕೆಲವು ಕಡೆ ಹಾಸ್ಟೆಲ್‌ಗೆ ಸ್ವಂತ ಕಟ್ಟಡ ಇರದಿದ್ದರೂ, ಅಲ್ಲಿನ ಶಿಕ್ಷಕರು ಶ್ರಮ ವಹಿಸಿ ಮಕ್ಕಳಿಗೆ ಬೋಧನೆ ಮಾಡುತ್ತಾರೆ. ಅವರ ನಿರಂತರ ಶ್ರಮದಿಂದ ಪ್ರತಿ ವರ್ಷವೂ ರಾಜ್ಯದಲ್ಲಿರುವ ಬಹುತೇಕ ಎಲ್ಲ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳೂ ಒಳ್ಳೆಯ ಫಲಿತಾಂಶ ನೀಡುತ್ತ ಬಂದಿವೆ. ಸರ್ಕಾರಿ ಶಾಲೆಯ ಶಿಕ್ಷಣ ಬೇಡ ಎನ್ನುವ ಕಾಮಾಲೆ ಕಣ್ಣಿನವರು ಅಂಕಿತಾರ ಸಾಧನೆಯನ್ನು ಗಮನಿಸಬೇಕು. ಇನ್ನಾದರೂ ಸರ್ಕಾರಿ ಶಾಲೆಗಳ ಬಗ್ಗೆ ಅದರಲ್ಲಿಯೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಬಗ್ಗೆ ಹೊಂದಿರುವ ನಕಾರಾತ್ಮಕ ಧೋರಣೆ ಗಳಿಂದ ಹೊರಬಂದರೆ, ಸರ್ಕಾರಿ ಶಾಲೆಗಳಿಗೆ ಬೇಡಿಕೆ ಹೆಚ್ಚುತ್ತದೆ.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

9 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

14 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

14 hours ago