ಓದುಗರ ಪತ್ರ
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ ಬೆಳಕಾಗಿದ್ದ ಹಾಗೂ ಜನರಿಂದ ಪ್ರೀತಿಯಿಂದ ಬಾಬಾ ಸಾಹೇಬ್ ಎಂದೇ ಕರೆಸಿಕೊಳ್ಳುತ್ತಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದೆ.
ಭಾರತದಲ್ಲಿ ವ್ಯಾಸಂಗಮಾಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಅಂಬೇಡ್ಕರ್ ಅವರು ಕೊಲಂಬಿಯಾ ವಿಶ್ವವಿದ್ಯಾನಿಲಯದಲ್ಲಿ ಉನ್ನತ ವ್ಯಾಸಂಗ ಮಾಡಿ ಜ್ಞಾನದ ಭಂಡಾರವೇ ಆಗಿದ್ದರು.
ರಾಜ ಪ್ರಭುತ್ವದಿಂದ ಪ್ರಜಾಪ್ರಭುತ್ವದೆಡೆಗೆ ದೇಶವನ್ನು ಮುನ್ನಡೆಸಿದ ಬಾಬಾ ಸಾಹೇಬರು ತೆರಿಗೆ ಪಾವತಿದಾರರಿಗೆ ಮಾತ್ರ ಮೀಸಲಾಗಿದ್ದ ಮತದಾನದ ಹಕ್ಕನ್ನು ದೇಶದ ಎಲ್ಲ ಪ್ರಜೆಗಳಿಗೂ ನೀಡಿದರು. ಮಹಿಳೆಯರ ಮೇಲಾಗುತ್ತಿದ್ದ ಶೋಷಣೆಯನ್ನು ತಡೆಯಲು ಸಂವಿಧಾನದಲ್ಲಿ ಕಾನೂನು ರೂಪಿಸಿದರು. ಕಾರ್ಮಿಕ ಕಾಯ್ದೆಗಳ ಮೂಲಕ ಕಾರ್ಮಿಕರ ಶೋಷಣೆಗೆ ಕಡಿವಾಣ ಹಾಕುವ ಮೂಲಕ ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಎಂಬಂತೆ ಶ್ರೇಷ್ಠ ಸಂವಿಧಾನದ ಮೂಲಕ ವಿಶ್ವಕ್ಕೆ ಮಾದರಿಯಾಗಿದ್ದಾರೆ. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಿದರೆ ಅವರ ಜನ್ಮದಿನಾಚರಣೆಗೆ ಅರ್ಥ ಬರುತ್ತದೆ.
– ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…