Mysore
28
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

ಓದುಗರ ಪತ್ರ: ಸಾರಿಗೆ ಬಸ್‌ನಲ್ಲಿ ಕುಡಿಯುವ ನೀರು ವ್ಯವಸ್ಥೆ!

ಮೈಸೂರು ಜಿಲ್ಲೆಯ ತಿ. ನರಸೀಪುರದಿಂದ ಬನ್ನೂರು ಮಾರ್ಗವಾಗಿ ಮಂಡ್ಯಕ್ಕೆ ತೆರಳುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕ ಹಾಗೂ ನಿರ್ವಾಹಕರು ಸ್ವಂತ ವೆಚ್ಚದಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಮಾದರಿಯಾಗಿದ್ದಾರೆ.

ಇದು ಬೇಸಿಗೆಯ ಕಾಲವಾಗಿರುವುದರಿಂದ ಪ್ರಯಾಣಿಕರು ಕುಡಿಯುವ ನೀರಿಲ್ಲದೇ ಪರದಾಡುತ್ತಿರುವುದನ್ನು ಕಂಡ ಚಾಲಕ ಹಾಗೂ ನಿರ್ವಾಹಕರು ಬಸ್‌ನಲ್ಲಿಯೇ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದು, ಪ್ರತಿ ದಿನ ೨ರಿಂದ ೩ ಕ್ಯಾನ್ ನೀರು ಖರ್ಚಾಗುತ್ತದೆ. ಸಾರಿಗೆ ನಿಗಮದ ಸಿಬ್ಬಂದಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದರಿಂದ ಬಸ್‌ನಲ್ಲಿ ಸಂಚರಿಸುವ ಪ್ರಯಾಣಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

– ಎಂ.ಮಹೇಶ್ ನಿಲಸೋಗೆ, ಗಿರಿದರ್ಶಿನಿ ಬಡಾವಣೆ, ಮೈಸೂರು

 

 

Tags:
error: Content is protected !!