ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜ್ಯದಲ್ಲಿ ಕರ್ನಾಟಕ ಪವರ್ ಕಾರ್ಪೋರೇಷನ್ (ಕೆಪಿಸಿ) ಮೂಲಕಜಲವಿದ್ಯುತ್ ಹಾಗೂ ಉಷ್ಣ ವಿದ್ಯುತ್ ಉತ್ಪಾದಿಸಲಾಗುತ್ತಿದ್ದು, ಕರ್ನಾಟಕ ವಿದ್ಯುತ್ಪ್ರಸರಣ ನಿಗಮ(ಕೆಪಿಟಿಸಿಎಲ್)ವು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪೆನಿ (ಸೆಸ್ಕ್) ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪೆನಿ (ಹೆಸ್ಕಾಂ), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿ(ಹೆಸ್ಕಾಂ), ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ(ಮೆಸ್ಕಾಂ) ಮೊದಲಾದ ವಿದ್ಯುತ್ ವಿತರಣಾ ಕಂಪೆನಿಗಳ ಮೂಲಕ ರಾಜ್ಯಾದ್ಯಂತ ವಿದ್ಯುತ್ ಸರಬರಾಜು ಮಾಡುತ್ತಿದೆ.
ವಿದ್ಯುತ್ ವಿತರಣೆಯನ್ನು ಖಾಸಗೀಕರಣ ಮಾಡಿದರೆ ೨೦೦ ಯೂನಿಟ್ವರೆಗಿನ ಉಚಿತ ವಿದ್ಯುತ್ ವಿತರಣೆ ಸ್ಥಗಿತಗೊಳ್ಳುವ ಸಾಧ್ಯತೆಯಿರುತ್ತದೆ. ಅಲ್ಲದೇ ಸಾವಿರಾರು ನೌಕರರೂ ಕೆಲಸ ಕಳೆದುಕೊಳ್ಳಲಿದ್ದಾರೆ. ರಾಜ್ಯ ಸರ್ಕಾರ ವಿದ್ಯುತ್ ವಿತರಣೆಯನ್ನು ಖಾಸಗೀಕರಣಗೊಳಿಸದೇ ಎಸ್ಕಾಂಗಳ ನೌಕರರು ಹಾಗೂ ರಾಜ್ಯದ ಜನರ ಹಿತ ಕಾಪಾಡಬೇಕಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು



