ಓದುಗರ ಪತ್ರ
ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಜ್ಯದಲ್ಲಿ ಕರ್ನಾಟಕ ಪವರ್ ಕಾರ್ಪೋರೇಷನ್ (ಕೆಪಿಸಿ) ಮೂಲಕಜಲವಿದ್ಯುತ್ ಹಾಗೂ ಉಷ್ಣ ವಿದ್ಯುತ್ ಉತ್ಪಾದಿಸಲಾಗುತ್ತಿದ್ದು, ಕರ್ನಾಟಕ ವಿದ್ಯುತ್ಪ್ರಸರಣ ನಿಗಮ(ಕೆಪಿಟಿಸಿಎಲ್)ವು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಬೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪೆನಿ (ಸೆಸ್ಕ್) ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪೆನಿ (ಹೆಸ್ಕಾಂ), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿ(ಹೆಸ್ಕಾಂ), ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ(ಮೆಸ್ಕಾಂ) ಮೊದಲಾದ ವಿದ್ಯುತ್ ವಿತರಣಾ ಕಂಪೆನಿಗಳ ಮೂಲಕ ರಾಜ್ಯಾದ್ಯಂತ ವಿದ್ಯುತ್ ಸರಬರಾಜು ಮಾಡುತ್ತಿದೆ.
ವಿದ್ಯುತ್ ವಿತರಣೆಯನ್ನು ಖಾಸಗೀಕರಣ ಮಾಡಿದರೆ ೨೦೦ ಯೂನಿಟ್ವರೆಗಿನ ಉಚಿತ ವಿದ್ಯುತ್ ವಿತರಣೆ ಸ್ಥಗಿತಗೊಳ್ಳುವ ಸಾಧ್ಯತೆಯಿರುತ್ತದೆ. ಅಲ್ಲದೇ ಸಾವಿರಾರು ನೌಕರರೂ ಕೆಲಸ ಕಳೆದುಕೊಳ್ಳಲಿದ್ದಾರೆ. ರಾಜ್ಯ ಸರ್ಕಾರ ವಿದ್ಯುತ್ ವಿತರಣೆಯನ್ನು ಖಾಸಗೀಕರಣಗೊಳಿಸದೇ ಎಸ್ಕಾಂಗಳ ನೌಕರರು ಹಾಗೂ ರಾಜ್ಯದ ಜನರ ಹಿತ ಕಾಪಾಡಬೇಕಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…