Andolana originals

ಓದುಗರ ಪತ್ರ: ವಿದ್ಯುತ್ ದರ ಏರಿಕೆ ಜನಸಾಮಾನ್ಯರಿಗೆ ಶಾಕ್

ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್‌ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿರುವುದು ಆತಂಕಕಾರಿ ವಿಷಯ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದು ಗಾಯದ ಮೇಲೆ ಬರೆ ಎಳೆದಂತಿದೆ. ಸರ್ಕಾರವು ಒಂದು ಕಡೆ ಉಚಿತ ವಿದ್ಯುತ್ ಯೋಜನೆ ನೀಡುತ್ತಿದ್ದರೆ ಮತ್ತೊಂದೆಡೆ ಇಂಧನ ಹೊಂದಾಣಿಕೆ ಹಾಗೂ ಸ್ಥಿರ ಶುಲ್ಕದ ಹೆಸರಿನಲ್ಲಿ ದರ ಏರಿಕೆ ಮಾಡುತ್ತಿರುವುದು ಸರಿಯಲ್ಲ. ಬೆಸ್ಕಾಂ ಒಂದೇ ರೂ.೨,೮೦೦ ಕೋಟಿ ನಷ್ಟ ಅನುಭವಿಸಲು ಇಲಾಖೆಯ ನಿರ್ವಹಣಾ ವೈಫಲ್ಯ ಮತ್ತು ಅದಕ್ಷತೆ ಕಾರಣವೇ ಹೊರತು ಪ್ರಾಮಾಣಿಕ ಗ್ರಾಹಕರಲ್ಲ. ಕೈಗಾರಿಕಾ ಮತ್ತು ವಾಣಿಜ್ಯ ವಲಯದ ಮೇಲಿನ ಈ ಹೊರೆ ಅಂತಿಮವಾಗಿ ಬೆಲೆ ಏರಿಕೆಗೆ ದಾರಿಯಾಗುತ್ತದೆ. ಸಾರ್ವಜನಿಕ ಅಭಿಪ್ರಾಯ ಸಂಗ್ರಹದ ಹೆಸರಿನಲ್ಲಿ ಈ ಪ್ರಸ್ತಾವನೆಯನ್ನು ಅಂಗೀಕರಿಸಬಾರದು. ಸರ್ಕಾರವು ಎಸ್ಕಾಂಗಳ ಸೋರಿಕೆ ತಡೆಗಟ್ಟಿ ನಷ್ಟವನ್ನು ಸರಿದೂಗಿಸುವ ಪರ್ಯಾಯ ಮಾರ್ಗಗಳನ್ನು ಹುಡುಕಬೇಕು.

 -ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

11 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

12 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

13 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

17 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

18 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

24 hours ago