ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿರುವುದು ಆತಂಕಕಾರಿ ವಿಷಯ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದು ಗಾಯದ ಮೇಲೆ ಬರೆ ಎಳೆದಂತಿದೆ. ಸರ್ಕಾರವು ಒಂದು ಕಡೆ ಉಚಿತ ವಿದ್ಯುತ್ ಯೋಜನೆ ನೀಡುತ್ತಿದ್ದರೆ ಮತ್ತೊಂದೆಡೆ ಇಂಧನ ಹೊಂದಾಣಿಕೆ ಹಾಗೂ ಸ್ಥಿರ ಶುಲ್ಕದ ಹೆಸರಿನಲ್ಲಿ ದರ ಏರಿಕೆ ಮಾಡುತ್ತಿರುವುದು ಸರಿಯಲ್ಲ. ಬೆಸ್ಕಾಂ ಒಂದೇ ರೂ.೨,೮೦೦ ಕೋಟಿ ನಷ್ಟ ಅನುಭವಿಸಲು ಇಲಾಖೆಯ ನಿರ್ವಹಣಾ ವೈಫಲ್ಯ ಮತ್ತು ಅದಕ್ಷತೆ ಕಾರಣವೇ ಹೊರತು ಪ್ರಾಮಾಣಿಕ ಗ್ರಾಹಕರಲ್ಲ. ಕೈಗಾರಿಕಾ ಮತ್ತು ವಾಣಿಜ್ಯ ವಲಯದ ಮೇಲಿನ ಈ ಹೊರೆ ಅಂತಿಮವಾಗಿ ಬೆಲೆ ಏರಿಕೆಗೆ ದಾರಿಯಾಗುತ್ತದೆ. ಸಾರ್ವಜನಿಕ ಅಭಿಪ್ರಾಯ ಸಂಗ್ರಹದ ಹೆಸರಿನಲ್ಲಿ ಈ ಪ್ರಸ್ತಾವನೆಯನ್ನು ಅಂಗೀಕರಿಸಬಾರದು. ಸರ್ಕಾರವು ಎಸ್ಕಾಂಗಳ ಸೋರಿಕೆ ತಡೆಗಟ್ಟಿ ನಷ್ಟವನ್ನು ಸರಿದೂಗಿಸುವ ಪರ್ಯಾಯ ಮಾರ್ಗಗಳನ್ನು ಹುಡುಕಬೇಕು.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…