ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿರುವುದು ಆತಂಕಕಾರಿ ವಿಷಯ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದು ಗಾಯದ ಮೇಲೆ ಬರೆ ಎಳೆದಂತಿದೆ. ಸರ್ಕಾರವು ಒಂದು ಕಡೆ ಉಚಿತ ವಿದ್ಯುತ್ ಯೋಜನೆ ನೀಡುತ್ತಿದ್ದರೆ ಮತ್ತೊಂದೆಡೆ ಇಂಧನ ಹೊಂದಾಣಿಕೆ ಹಾಗೂ ಸ್ಥಿರ ಶುಲ್ಕದ ಹೆಸರಿನಲ್ಲಿ ದರ ಏರಿಕೆ ಮಾಡುತ್ತಿರುವುದು ಸರಿಯಲ್ಲ. ಬೆಸ್ಕಾಂ ಒಂದೇ ರೂ.೨,೮೦೦ ಕೋಟಿ ನಷ್ಟ ಅನುಭವಿಸಲು ಇಲಾಖೆಯ ನಿರ್ವಹಣಾ ವೈಫಲ್ಯ ಮತ್ತು ಅದಕ್ಷತೆ ಕಾರಣವೇ ಹೊರತು ಪ್ರಾಮಾಣಿಕ ಗ್ರಾಹಕರಲ್ಲ. ಕೈಗಾರಿಕಾ ಮತ್ತು ವಾಣಿಜ್ಯ ವಲಯದ ಮೇಲಿನ ಈ ಹೊರೆ ಅಂತಿಮವಾಗಿ ಬೆಲೆ ಏರಿಕೆಗೆ ದಾರಿಯಾಗುತ್ತದೆ. ಸಾರ್ವಜನಿಕ ಅಭಿಪ್ರಾಯ ಸಂಗ್ರಹದ ಹೆಸರಿನಲ್ಲಿ ಈ ಪ್ರಸ್ತಾವನೆಯನ್ನು ಅಂಗೀಕರಿಸಬಾರದು. ಸರ್ಕಾರವು ಎಸ್ಕಾಂಗಳ ಸೋರಿಕೆ ತಡೆಗಟ್ಟಿ ನಷ್ಟವನ್ನು ಸರಿದೂಗಿಸುವ ಪರ್ಯಾಯ ಮಾರ್ಗಗಳನ್ನು ಹುಡುಕಬೇಕು.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…