ಓದುಗರ ಪತ್ರ
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಕಳೆದ ವರ್ಷ ಐದು ವರ್ಷ ಐದು ತಿಂಗಳಿಗೆ ಒಂದನೇ ತರಗತಿಯ ಪ್ರವೇಶ ಎಂದು ಅನುಮತಿ ನೀಡಿದ್ದರು. ಆದರೆ ಈ ವರ್ಷ ಮತ್ತೆ ಆರು ವರ್ಷ ವಯೋಮಿತಿಯನ್ನು ಕಡ್ಡಾಯಗೊಳಿಸಿದ್ದಾರೆ. ಇದು ಬೇಸರದ ಸಂಗತಿಯಾಗಿದೆ. ಆರು ವರ್ಷಕ್ಕಿಂತ ಕೆಲವು ತಿಂಗಳ ಅಂತರದಿಂದ ಮತ್ತೆ ಹಿಂದಿನ ತರಗತಿಯಲ್ಲಿ ಉಳಿಯುತ್ತಾರೆ. ಇದರಿಂದ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಕಲಿಕೆಯಲ್ಲಿ ತೊಂದರೆ ಇದ್ದರೆ ತಡೆ ಹಿಡಿದರೆ ಅಡ್ಡಿ ಇಲ್ಲ. ಆದರೆ ಎಲ್ಲಾ ಮಕ್ಕಳು ಜೂನ್ ತಿಂಗಳಲ್ಲಿ ಆರು ವರ್ಷ ತುಂಬುವ ಹಾಗೆ ಜನಿಸಲು ಸಾಧ್ಯವಾ? ಆರು ವರ್ಷ ವಯೋಮಿತಿ ಕಡ್ಡಾಯಗೊಳಿಸಿರುವುದರಿಂದ ಮಕ್ಕಳು ಶಾಲೆಯಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಾಗಿರುತ್ತದೆ. ಶಿಕ್ಷಣ ಸಚಿವರು ಈ ನಿಟ್ಟಿನಲ್ಲಿ ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಈ ಮೊದಲಿನಂತೆ ಶಾಲಾ ದಾಖಲಾತಿಯ ವಯೋಮಿತಿಯನ್ನು ನಿಗದಿಮಾಡಬೇಕು
-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…