ಓದುಗರ ಪತ್ರ
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಕಳೆದ ವರ್ಷ ಐದು ವರ್ಷ ಐದು ತಿಂಗಳಿಗೆ ಒಂದನೇ ತರಗತಿಯ ಪ್ರವೇಶ ಎಂದು ಅನುಮತಿ ನೀಡಿದ್ದರು. ಆದರೆ ಈ ವರ್ಷ ಮತ್ತೆ ಆರು ವರ್ಷ ವಯೋಮಿತಿಯನ್ನು ಕಡ್ಡಾಯಗೊಳಿಸಿದ್ದಾರೆ. ಇದು ಬೇಸರದ ಸಂಗತಿಯಾಗಿದೆ. ಆರು ವರ್ಷಕ್ಕಿಂತ ಕೆಲವು ತಿಂಗಳ ಅಂತರದಿಂದ ಮತ್ತೆ ಹಿಂದಿನ ತರಗತಿಯಲ್ಲಿ ಉಳಿಯುತ್ತಾರೆ. ಇದರಿಂದ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಕಲಿಕೆಯಲ್ಲಿ ತೊಂದರೆ ಇದ್ದರೆ ತಡೆ ಹಿಡಿದರೆ ಅಡ್ಡಿ ಇಲ್ಲ. ಆದರೆ ಎಲ್ಲಾ ಮಕ್ಕಳು ಜೂನ್ ತಿಂಗಳಲ್ಲಿ ಆರು ವರ್ಷ ತುಂಬುವ ಹಾಗೆ ಜನಿಸಲು ಸಾಧ್ಯವಾ? ಆರು ವರ್ಷ ವಯೋಮಿತಿ ಕಡ್ಡಾಯಗೊಳಿಸಿರುವುದರಿಂದ ಮಕ್ಕಳು ಶಾಲೆಯಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಾಗಿರುತ್ತದೆ. ಶಿಕ್ಷಣ ಸಚಿವರು ಈ ನಿಟ್ಟಿನಲ್ಲಿ ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಈ ಮೊದಲಿನಂತೆ ಶಾಲಾ ದಾಖಲಾತಿಯ ವಯೋಮಿತಿಯನ್ನು ನಿಗದಿಮಾಡಬೇಕು
-ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…