ಓದುಗರ ಪತ್ರ
ಮೈಸೂರಿನ ಲಿಂಗದೇವರ ಕೊಪ್ಪಲಿನ ಬಳಿ ಇರುವ ಒಂದು ಖಾಸಗಿ ಹೋಟೆಲ್ ರಸ್ತೆಯನ್ನು ಅತಿಕ್ರಮಣ ಮಾಡಿಕೊಂಡಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ಹೋಟೆಲಿಗೆ ಬರುವ ಗ್ರಾಹಕರು ರಸ್ತೆಗೆ ಅಂಟಿಕೊಂಡಂತೆ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ಇದರಿಂದ ಮುಖ್ಯ ರಸ್ತೆಯಲ್ಲಿ ಓಡಾಡುವ ವಾಹನಗಳಿಗೆ ಹಾಗೂ ರಸ್ತೆ ಬದಿಯಲ್ಲಿ ತಿರುಗಾಡುವ ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ.
ಈ ರಸ್ತೆಯಲ್ಲೇ ಶಾಪಿಂಗ್ ಮಾಲ್ ಇರುವುದರಿಂದ ಅಲ್ಲಿಗೆ ಬರುವ ಗ್ರಾಹಕರು, ಅಲ್ಲೇ ಅಕ್ಕಪಕ್ಕದಲ್ಲಿರುವ ಕಾರ್ಖಾನೆಗಳಿಗೆ ಬರುವ ಉದ್ಯೋಗಿಗಳೂ ತೊಂದರೆಗೆ ಒಳಗಾಗಿದ್ದಾರೆ. ಮೈಸೂರು, ಮಡಿಕೇರಿ, ಹಾಸನ, ಚಿಕ್ಕಮಗಳೂರು ಕಡೆಗೆ ಹೋಗುವ ವಾಹನಗಳು ಇದೇ ಮಾರ್ಗವಾಗಿ ಸಂಚರಿಸುವುದರಿಂದ ಬೆಳಗಿನ ಸಮಯ ಹಾಗೂ ಸಂಜೆಯ ಸಮಯದಲ್ಲಿ ವಾಹನಗಳ ದಟ್ಟಣೆ ಆ ರಸ್ತೆಯಲ್ಲಿ ಅತಿ ಹೆಚ್ಚಾಗಿರುತ್ತದೆ.
ಜನ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ರಸ್ತೆಯ ಅತಿಕ್ರಮಣ ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…