ಓದುಗರ ಪತ್ರ
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಬಸ್ಸುಗಳು ಹಳೆಯದಾಗಿರುವುದರಿಂದ ವಿಪರೀತ ಹೊಗೆ ಬರುತ್ತಿದೆ ಎನ್ನಲಾಗುತ್ತಿದೆ.
ಟ್ರಾಫಿಕ್ ಪೊಲೀಸರು ಪೆಟ್ರೋಲ್, ಡೀಸೆಲ್ನಿಂದ ಸಂಚರಿಸುವ ಪ್ರತಿಯೊಂದು ವಾಹನಗಳಿಗೂ ಹೊಗೆ ತಪಾಸಣೆ ಕಡ್ಡಾಯಗೊಳಿಸಿದ್ದು, ಅನುಮಾನ ಬಂದಲ್ಲಿ ದಂಡವನ್ನು ವಿಧಿಸುತ್ತಾರೆ. ಆದರೆ ಸರ್ಕಾರದ ಒಡೆತನದಲ್ಲಿರುವ ಸಾರಿಗೆ ನಿಗಮದ ಬಸ್ಗಳಿಗೆ ಮಾಲಿನ್ಯ ತಪಾಸಣೆ ಅನ್ವಯಿಸುವುದಿಲ್ಲವೇ ಎಂಬ ಅನುಮಾನ ಬರುತ್ತಿದೆ. ಕೂಡಲೇ ನಗರ ಸಾರಿಗೆ ಅಧಿಕಾರಿಗಳು ತೀವ್ರವಾಗಿ ಹೊಗೆ ಸೂಸುತ್ತಿರುವ ನಗರ ಸಾರಿಗೆ ಬಸ್ಗಳ ಸಂಚಾರವನ್ನು ನಿಲ್ಲಿಸಬೇಕು ಹಾಗೂ ಬೆಂಗಳೂರಿನ ಮಾದರಿಯಲ್ಲಿ ಮೈಸೂರಿನಲ್ಲೂ ವಿದ್ಯುತ್ ಚಾಲಿತ ನಗರ ಸಾರಿಗೆ ಬಸ್ಗಳ ಸಂಚಾರಕ್ಕೆ ಕ್ರಮ ಕೈಗೊಂಡು ಪರಿಸರ ನೈರ್ಮಲ್ಯ ಕಾಪಾಡಬೇಕಾಗಿದೆ.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಮೈಸೂರು: ಅಪಾರ್ಟ್ಮೆಂಟ್ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು…