ಓದುಗರ ಪತ್ರ
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಬಸ್ಸುಗಳು ಹಳೆಯದಾಗಿರುವುದರಿಂದ ವಿಪರೀತ ಹೊಗೆ ಬರುತ್ತಿದೆ ಎನ್ನಲಾಗುತ್ತಿದೆ.
ಟ್ರಾಫಿಕ್ ಪೊಲೀಸರು ಪೆಟ್ರೋಲ್, ಡೀಸೆಲ್ನಿಂದ ಸಂಚರಿಸುವ ಪ್ರತಿಯೊಂದು ವಾಹನಗಳಿಗೂ ಹೊಗೆ ತಪಾಸಣೆ ಕಡ್ಡಾಯಗೊಳಿಸಿದ್ದು, ಅನುಮಾನ ಬಂದಲ್ಲಿ ದಂಡವನ್ನು ವಿಧಿಸುತ್ತಾರೆ. ಆದರೆ ಸರ್ಕಾರದ ಒಡೆತನದಲ್ಲಿರುವ ಸಾರಿಗೆ ನಿಗಮದ ಬಸ್ಗಳಿಗೆ ಮಾಲಿನ್ಯ ತಪಾಸಣೆ ಅನ್ವಯಿಸುವುದಿಲ್ಲವೇ ಎಂಬ ಅನುಮಾನ ಬರುತ್ತಿದೆ. ಕೂಡಲೇ ನಗರ ಸಾರಿಗೆ ಅಧಿಕಾರಿಗಳು ತೀವ್ರವಾಗಿ ಹೊಗೆ ಸೂಸುತ್ತಿರುವ ನಗರ ಸಾರಿಗೆ ಬಸ್ಗಳ ಸಂಚಾರವನ್ನು ನಿಲ್ಲಿಸಬೇಕು ಹಾಗೂ ಬೆಂಗಳೂರಿನ ಮಾದರಿಯಲ್ಲಿ ಮೈಸೂರಿನಲ್ಲೂ ವಿದ್ಯುತ್ ಚಾಲಿತ ನಗರ ಸಾರಿಗೆ ಬಸ್ಗಳ ಸಂಚಾರಕ್ಕೆ ಕ್ರಮ ಕೈಗೊಂಡು ಪರಿಸರ ನೈರ್ಮಲ್ಯ ಕಾಪಾಡಬೇಕಾಗಿದೆ.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…
ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…
ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…
ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…