ಅಭಿವೃದ್ಧಿಯ ಹೆಸರಿನಲ್ಲಿ ನಾವು ಪರಿಸರ ನಾಶ ಮಾಡಿದ್ದರ ಪರಿಣಾಮವಾಗಿ ಇಂದು ಪ್ರಕೃತಿ ವಿಕೋಪದಂತಹ ದುರಂತಗಳನ್ನು ಅನುಭವಿಸುತ್ತಿದ್ದೇವೆ. ದೇಶದ ನಾನಾ ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತ, ಪ್ರವಾಹಗಳನ್ನು ಸಂಭವಿಸುತ್ತಿದ್ದು, ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಪ್ರವಾಹ ನೂರಾರು ಜನರ ಜೀವ, ಜೀವನವನ್ನೇ ಕಸಿದು ಬಿಟ್ಟಿದೆ. ಕೆಲವು ಗ್ರಾಮಗಳೇ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಪ್ರಕೃತಿ ವಿಕೋಪದ ಭೀಕರತೆಯನ್ನು ತೋರುತ್ತದೆ. ಜನರು ತಮ್ಮ ಅವಶ್ಯಕತೆಗಳಿಗಾಗಿ ಪ್ರಕೃತಿಯ ಒಡಲನ್ನು ಬಗೆದು ನಾಶ ಮಾಡಿ, ಹಂತ ಹಂತವಾಗಿ ಕಾಡುಗಳನ್ನು ಕಡಿದು ನಗರಗಳನ್ನು ಸೃಷ್ಟಿಸಿ, ಬೆಟ್ಟಗಳನ್ನು ಕೊರೆದು ರಸ್ತೆಗಳನ್ನು ನಿರ್ಮಿಸಿದರು.
ತಮ್ಮ ಪ್ರತಿಯೊಂದೂ ಅಗತ್ಯತೆಗಳಿಗಾಗಿ ಪರಿಸರವನ್ನು ನಾಶ ಮಾಡಿದ ಪರಿಣಾಮ ಈಗ ಪ್ರಕೃತಿಯೇ ಮನುಷ್ಯನಿಗೆ ಪಾಠ ಕಲಿಸುತ್ತಿದೆ ಎನ್ನುವುದಕ್ಕೆ ದೇವರ ನಾಡು ಎಂದು ಕರೆಸಿಕೊಳ್ಳುವ ಕೇರಳದ ವಯನಾಡು ದುರಂತವೇ ಸಾಕ್ಷಿ. ಇಂತಹ ಘಟನೆಗಳೆಂದ ನಾವು ಪಾಠ ಕಲಿತು, ಮುಂದಾದರೂ ಪರಿಸರವನ್ನು ಸಂರಕ್ಷಿಸುವುದನ್ನು ಕಲಿಯೋಣ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…