ಅಭಿವೃದ್ಧಿಯ ಹೆಸರಿನಲ್ಲಿ ನಾವು ಪರಿಸರ ನಾಶ ಮಾಡಿದ್ದರ ಪರಿಣಾಮವಾಗಿ ಇಂದು ಪ್ರಕೃತಿ ವಿಕೋಪದಂತಹ ದುರಂತಗಳನ್ನು ಅನುಭವಿಸುತ್ತಿದ್ದೇವೆ. ದೇಶದ ನಾನಾ ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತ, ಪ್ರವಾಹಗಳನ್ನು ಸಂಭವಿಸುತ್ತಿದ್ದು, ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಪ್ರವಾಹ ನೂರಾರು ಜನರ ಜೀವ, ಜೀವನವನ್ನೇ ಕಸಿದು ಬಿಟ್ಟಿದೆ. ಕೆಲವು ಗ್ರಾಮಗಳೇ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಪ್ರಕೃತಿ ವಿಕೋಪದ ಭೀಕರತೆಯನ್ನು ತೋರುತ್ತದೆ. ಜನರು ತಮ್ಮ ಅವಶ್ಯಕತೆಗಳಿಗಾಗಿ ಪ್ರಕೃತಿಯ ಒಡಲನ್ನು ಬಗೆದು ನಾಶ ಮಾಡಿ, ಹಂತ ಹಂತವಾಗಿ ಕಾಡುಗಳನ್ನು ಕಡಿದು ನಗರಗಳನ್ನು ಸೃಷ್ಟಿಸಿ, ಬೆಟ್ಟಗಳನ್ನು ಕೊರೆದು ರಸ್ತೆಗಳನ್ನು ನಿರ್ಮಿಸಿದರು.
ತಮ್ಮ ಪ್ರತಿಯೊಂದೂ ಅಗತ್ಯತೆಗಳಿಗಾಗಿ ಪರಿಸರವನ್ನು ನಾಶ ಮಾಡಿದ ಪರಿಣಾಮ ಈಗ ಪ್ರಕೃತಿಯೇ ಮನುಷ್ಯನಿಗೆ ಪಾಠ ಕಲಿಸುತ್ತಿದೆ ಎನ್ನುವುದಕ್ಕೆ ದೇವರ ನಾಡು ಎಂದು ಕರೆಸಿಕೊಳ್ಳುವ ಕೇರಳದ ವಯನಾಡು ದುರಂತವೇ ಸಾಕ್ಷಿ. ಇಂತಹ ಘಟನೆಗಳೆಂದ ನಾವು ಪಾಠ ಕಲಿತು, ಮುಂದಾದರೂ ಪರಿಸರವನ್ನು ಸಂರಕ್ಷಿಸುವುದನ್ನು ಕಲಿಯೋಣ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…