ಓದುಗರ ಪತ್ರ
ಮೈಸೂರು ಮುಡಾದ ೫೦:೫೦ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿರುದ್ಧ ಇಡಿ ನೀಡಿದ್ದ ಸಮನ್ಸ್ ಅನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ರಾಜ್ಯ ಹೈಕೋರ್ಟ್ ಕೂಡ ಲೋಕಾಯುಕ್ತ ತನಿಖೆಯ ವರದಿಯನ್ನು ಮಾನ್ಯ ಮಾಡಿ ತೀರ್ಪು ನೀಡಿತ್ತು. ಆದರೆ ಪ್ರಕರಣ ಕೋರ್ಟ್ ಮೆಟ್ಟಿಲೇರಿದಾಗ ಪ್ರಕರಣದಲ್ಲಿ ಪ್ರಭಾವ ಬೀರಿರುವುದು ಮೇಲ್ನೋಟಕ್ಕೆ ಸತ್ಯವೆಂದು ತಿಳಿದು ಲೋಕಾಯುಕ್ತ ತನಿಖೆಗೆ ಕೋರ್ಟ್ ಒಪ್ಪಿಸಿತ್ತು. ತನಿಖೆ ನಡೆಸಿದ ಲೋಕಾಯುಕ್ತ ಕೋರ್ಟ್, ಯಾವುದೇ ಲಿಖಿತ ಸಾಕ್ಷಿ ಗಳು ಲಭ್ಯವಿಲ್ಲ ಎಂದು ಬಿಗ್ ರಿಪೋರ್ಟ್ ನೀಡಿತು. ಹೈ ಕೋರ್ಟ್ ಇದನ್ನು ಮಾನ್ಯ ಮಾಡಿತು.
ಸಚಿವ ಬೈರತಿ ಸುರೇಶ್ ಇದರಲ್ಲಿ ನನ್ನ ಮತ್ತು ಸಿಎಂ ಪತ್ನಿಯ ಪಾತ್ರವಿಲ್ಲ ಎಂದಿದ್ದಾರೆ. ಹಾಗಾದರೆ ಹಗರಣ ಬೆಳಕಿಗೆ ಬಂದ ಕೂಡಲೇ ಹೆಲಿಕಾಪ್ಟರ್ನಲ್ಲಿ ಮುಡಾ ಕಡತಗಳನ್ನೆಲ್ಲಾ ಬೆಂಗಳೂರಿಗೆ ತೆಗೆದುಕೊಂಡು ಹೋದದ್ದೇಕೆ? ಪ್ರಭಾವ ಬೀರದೆ ೧೪ ನಿವೇಶನಗಳು ಮಂಜೂರಾದದ್ದು ಹೇಗೆ? ಆಗಲೇ ನಿವೇಶನಗಳು ಬೇಡ ಎನ್ನಬಹುದಿತ್ತಲ್ಲವೇ.
ನಿವೇಶನ ವಾಪಸ್ ನೀಡಿದ ಮಾತ್ರಕ್ಕೆ ಅಪರಾಧ ಶೂನ್ಯ ವಾಗುತ್ತದೆಯೇ. ಹಾಗಾದರೆ ಪೊಲೀಸರು ಇನ್ನು ಮುಂದೆ ಕಳ್ಳರು ಕದ್ದ ಮಾಲು ಸಿಕ್ಕಿದ ಮೇಲೆ ಅವರ ಮೇಲಿರುವ ಪ್ರಕರಣ ರದ್ದು ಮಾಡಿ,ಖುಲಾಸೆಗೊಳಿಸಬೇಕು ಅಲ್ಲವೆ?
-ಮುಳ್ಳೂರು ಪ್ರಕಾಶ್, ಕನಕದಾಸನಗರ. ಮೈಸೂರು
ಬೆಂಗಳೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…
ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…
ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…