ಓದುಗರ ಪತ್ರ
ಮೈಸೂರು ಮುಡಾದ ೫೦:೫೦ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿರುದ್ಧ ಇಡಿ ನೀಡಿದ್ದ ಸಮನ್ಸ್ ಅನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ರಾಜ್ಯ ಹೈಕೋರ್ಟ್ ಕೂಡ ಲೋಕಾಯುಕ್ತ ತನಿಖೆಯ ವರದಿಯನ್ನು ಮಾನ್ಯ ಮಾಡಿ ತೀರ್ಪು ನೀಡಿತ್ತು. ಆದರೆ ಪ್ರಕರಣ ಕೋರ್ಟ್ ಮೆಟ್ಟಿಲೇರಿದಾಗ ಪ್ರಕರಣದಲ್ಲಿ ಪ್ರಭಾವ ಬೀರಿರುವುದು ಮೇಲ್ನೋಟಕ್ಕೆ ಸತ್ಯವೆಂದು ತಿಳಿದು ಲೋಕಾಯುಕ್ತ ತನಿಖೆಗೆ ಕೋರ್ಟ್ ಒಪ್ಪಿಸಿತ್ತು. ತನಿಖೆ ನಡೆಸಿದ ಲೋಕಾಯುಕ್ತ ಕೋರ್ಟ್, ಯಾವುದೇ ಲಿಖಿತ ಸಾಕ್ಷಿ ಗಳು ಲಭ್ಯವಿಲ್ಲ ಎಂದು ಬಿಗ್ ರಿಪೋರ್ಟ್ ನೀಡಿತು. ಹೈ ಕೋರ್ಟ್ ಇದನ್ನು ಮಾನ್ಯ ಮಾಡಿತು.
ಸಚಿವ ಬೈರತಿ ಸುರೇಶ್ ಇದರಲ್ಲಿ ನನ್ನ ಮತ್ತು ಸಿಎಂ ಪತ್ನಿಯ ಪಾತ್ರವಿಲ್ಲ ಎಂದಿದ್ದಾರೆ. ಹಾಗಾದರೆ ಹಗರಣ ಬೆಳಕಿಗೆ ಬಂದ ಕೂಡಲೇ ಹೆಲಿಕಾಪ್ಟರ್ನಲ್ಲಿ ಮುಡಾ ಕಡತಗಳನ್ನೆಲ್ಲಾ ಬೆಂಗಳೂರಿಗೆ ತೆಗೆದುಕೊಂಡು ಹೋದದ್ದೇಕೆ? ಪ್ರಭಾವ ಬೀರದೆ ೧೪ ನಿವೇಶನಗಳು ಮಂಜೂರಾದದ್ದು ಹೇಗೆ? ಆಗಲೇ ನಿವೇಶನಗಳು ಬೇಡ ಎನ್ನಬಹುದಿತ್ತಲ್ಲವೇ.
ನಿವೇಶನ ವಾಪಸ್ ನೀಡಿದ ಮಾತ್ರಕ್ಕೆ ಅಪರಾಧ ಶೂನ್ಯ ವಾಗುತ್ತದೆಯೇ. ಹಾಗಾದರೆ ಪೊಲೀಸರು ಇನ್ನು ಮುಂದೆ ಕಳ್ಳರು ಕದ್ದ ಮಾಲು ಸಿಕ್ಕಿದ ಮೇಲೆ ಅವರ ಮೇಲಿರುವ ಪ್ರಕರಣ ರದ್ದು ಮಾಡಿ,ಖುಲಾಸೆಗೊಳಿಸಬೇಕು ಅಲ್ಲವೆ?
-ಮುಳ್ಳೂರು ಪ್ರಕಾಶ್, ಕನಕದಾಸನಗರ. ಮೈಸೂರು
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…