Andolana originals

ಓದುಗರ ಪತ್ರ:  ಕದ್ದ ಮಾಲು ಸಿಕ್ಕ ಮೇಲೆ ಕಳ್ಳರನ್ನೂ ಖುಲಾಸೆಗೊಳಿಸಬೇಕು!

ಮೈಸೂರು ಮುಡಾದ ೫೦:೫೦ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿರುದ್ಧ ಇಡಿ ನೀಡಿದ್ದ ಸಮನ್ಸ್ ಅನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.‌

ರಾಜ್ಯ ಹೈಕೋರ್ಟ್ ಕೂಡ ಲೋಕಾಯುಕ್ತ ತನಿಖೆಯ ವರದಿಯನ್ನು ಮಾನ್ಯ ಮಾಡಿ ತೀರ್ಪು ನೀಡಿತ್ತು. ಆದರೆ ಪ್ರಕರಣ ಕೋರ್ಟ್ ಮೆಟ್ಟಿಲೇರಿದಾಗ ಪ್ರಕರಣದಲ್ಲಿ ಪ್ರಭಾವ ಬೀರಿರುವುದು ಮೇಲ್ನೋಟಕ್ಕೆ ಸತ್ಯವೆಂದು ತಿಳಿದು ಲೋಕಾಯುಕ್ತ ತನಿಖೆಗೆ ಕೋರ್ಟ್ ಒಪ್ಪಿಸಿತ್ತು. ತನಿಖೆ ನಡೆಸಿದ ಲೋಕಾಯುಕ್ತ ಕೋರ್ಟ್, ಯಾವುದೇ ಲಿಖಿತ ಸಾಕ್ಷಿ ಗಳು ಲಭ್ಯವಿಲ್ಲ ಎಂದು ಬಿಗ್ ರಿಪೋರ್ಟ್ ನೀಡಿತು. ಹೈ ಕೋರ್ಟ್ ಇದನ್ನು ಮಾನ್ಯ ಮಾಡಿತು.

ಸಚಿವ ಬೈರತಿ ಸುರೇಶ್ ಇದರಲ್ಲಿ ನನ್ನ ಮತ್ತು ಸಿಎಂ ಪತ್ನಿಯ ಪಾತ್ರವಿಲ್ಲ ಎಂದಿದ್ದಾರೆ. ಹಾಗಾದರೆ ಹಗರಣ ಬೆಳಕಿಗೆ ಬಂದ ಕೂಡಲೇ ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತಗಳನ್ನೆಲ್ಲಾ ಬೆಂಗಳೂರಿಗೆ ತೆಗೆದುಕೊಂಡು ಹೋದದ್ದೇಕೆ? ಪ್ರಭಾವ ಬೀರದೆ ೧೪ ನಿವೇಶನಗಳು ಮಂಜೂರಾದದ್ದು ಹೇಗೆ? ಆಗಲೇ ನಿವೇಶನಗಳು ಬೇಡ ಎನ್ನಬಹುದಿತ್ತಲ್ಲವೇ.

ನಿವೇಶನ ವಾಪಸ್ ನೀಡಿದ ಮಾತ್ರಕ್ಕೆ ಅಪರಾಧ ಶೂನ್ಯ ವಾಗುತ್ತದೆಯೇ. ಹಾಗಾದರೆ ಪೊಲೀಸರು ಇನ್ನು ಮುಂದೆ ಕಳ್ಳರು ಕದ್ದ ಮಾಲು ಸಿಕ್ಕಿದ ಮೇಲೆ ಅವರ ಮೇಲಿರುವ ಪ್ರಕರಣ ರದ್ದು ಮಾಡಿ,ಖುಲಾಸೆಗೊಳಿಸಬೇಕು ಅಲ್ಲವೆ?

-ಮುಳ್ಳೂರು ಪ್ರಕಾಶ್, ಕನಕದಾಸನಗರ. ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

18 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

18 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

18 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

18 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

18 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

18 hours ago