ರಾಜ್ಯ ಸರ್ಕಾರವು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಧಿಸೂಚನೆ ಹೊರಡಿಸಿದು, ಸ್ಪರ್ಧಾಕಾಂಕ್ಷಿಗಳು ಆನ್ಲೆ ನ್ ಮೂಲಕ ಅರ್ಜಿಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ಅಧಿಕೃತ ವೆಬ್ಸೈಟ್ನಲ್ಲಿ ಅವಕಾಶ ನೀಡಲಾಗಿದೆ. ಅರ್ಜಿ ಶುಲ್ಕವೂ ಹೆಚ್ಚಾಗಿರುವುದರಿಂದ ಬಡ ಮತ್ತು ಮಧ್ಯಮ ವರ್ಗದವರ ಮೇಲೆ ಹೊರೆ ಬೀಳಲಿದೆ. ಸ್ಪರ್ಧಾಕಾಂಕ್ಷಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಪರೀಕ್ಷಾ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿದ ಮೇಲೆ ಅವರ ಖಾತೆಯಿಂದ ಹಣ ಕಡಿತಗೊಂಡ ನಂತರವೂ ಪಾವತಿ ಪೂರ್ಣಗೊಂಡಿಲ್ಲ ಎಂದು ತೋರಿಸುತ್ತಿದೆ. ಅರ್ಜಿ ಸ್ಥಿತಿ ಪರಿಶೀಲಿಸಿದಾಗಲೂ ಪೂರ್ಣಗೊಂಡಿರುವ ಯಾವುದೇ ಮಾಹಿತಿ ಗೋಚರಿಸುತ್ತಿಲ್ಲ. ಇದರಿಂದಾಗಿ ಹಲವಾರು ಸ್ಪರ್ಧಾಕಾಂಕ್ಷಿಗಳು ಹಣ ಕಳೆದುಕೊಂಡು ಆತಂಕಗೊಂಡಿದ್ದಾರೆ ಮತ್ತು ಅರ್ಜಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ, ಆದ್ದರಿಂದ ಪುನಃ ಪಾವತಿಸಬೇಕೇ ಎಂಬ ಗೊಂದಲಕ್ಕೀಡಾಗಿದ್ದಾರೆ. ಹಾಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ರೀತಿಯ ಸಮಸ್ಯೆ ಎದುರಾಗಿರುವ ಸ್ಪರ್ಧಾರ್ಥಿಗಳಿಗೆ ಹಣವನ್ನು ಮರುಪಾವತಿಸಬೇಕು, ಇಲ್ಲವೇ ಅವರು ಸಲ್ಲಿಸಿರುವ ಅರ್ಜಿಯನ್ನು ಮಾನ್ಯ ಮಾಡಿ ಪೂರ್ಣಗೊಳಿಸಬೇಕಿದೆ ಹಾಗೂ ಇಂತಹ ತಾಂತ್ರಿಕ ದೋಷಗಳನ್ನು ಕೂಡಲೇ ಸರಿಪಡಿಸಿ, ಶುಲ್ಕ ಪಾವತಿಸುವ ಪ್ರಕ್ರಿಯೆಯನ್ನು ಸುಗಮಗೊಳಿಸಬೇಕಿದೆ.
– ಎಂ. ಪಿ. ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.
ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್ಆರ್ ಮೊಹಮದ್ ಹುಸೇನ್ಗೆ ಅನಧಿಕೃತ…
ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…
ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. 2023ರ…
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…