ರಾಜ್ಯ ಸರ್ಕಾರವು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಧಿಸೂಚನೆ ಹೊರಡಿಸಿದು, ಸ್ಪರ್ಧಾಕಾಂಕ್ಷಿಗಳು ಆನ್ಲೆ ನ್ ಮೂಲಕ ಅರ್ಜಿಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ಅಧಿಕೃತ ವೆಬ್ಸೈಟ್ನಲ್ಲಿ ಅವಕಾಶ ನೀಡಲಾಗಿದೆ. ಅರ್ಜಿ ಶುಲ್ಕವೂ ಹೆಚ್ಚಾಗಿರುವುದರಿಂದ ಬಡ ಮತ್ತು ಮಧ್ಯಮ ವರ್ಗದವರ ಮೇಲೆ ಹೊರೆ ಬೀಳಲಿದೆ. ಸ್ಪರ್ಧಾಕಾಂಕ್ಷಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಪರೀಕ್ಷಾ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿದ ಮೇಲೆ ಅವರ ಖಾತೆಯಿಂದ ಹಣ ಕಡಿತಗೊಂಡ ನಂತರವೂ ಪಾವತಿ ಪೂರ್ಣಗೊಂಡಿಲ್ಲ ಎಂದು ತೋರಿಸುತ್ತಿದೆ. ಅರ್ಜಿ ಸ್ಥಿತಿ ಪರಿಶೀಲಿಸಿದಾಗಲೂ ಪೂರ್ಣಗೊಂಡಿರುವ ಯಾವುದೇ ಮಾಹಿತಿ ಗೋಚರಿಸುತ್ತಿಲ್ಲ. ಇದರಿಂದಾಗಿ ಹಲವಾರು ಸ್ಪರ್ಧಾಕಾಂಕ್ಷಿಗಳು ಹಣ ಕಳೆದುಕೊಂಡು ಆತಂಕಗೊಂಡಿದ್ದಾರೆ ಮತ್ತು ಅರ್ಜಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ, ಆದ್ದರಿಂದ ಪುನಃ ಪಾವತಿಸಬೇಕೇ ಎಂಬ ಗೊಂದಲಕ್ಕೀಡಾಗಿದ್ದಾರೆ. ಹಾಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ರೀತಿಯ ಸಮಸ್ಯೆ ಎದುರಾಗಿರುವ ಸ್ಪರ್ಧಾರ್ಥಿಗಳಿಗೆ ಹಣವನ್ನು ಮರುಪಾವತಿಸಬೇಕು, ಇಲ್ಲವೇ ಅವರು ಸಲ್ಲಿಸಿರುವ ಅರ್ಜಿಯನ್ನು ಮಾನ್ಯ ಮಾಡಿ ಪೂರ್ಣಗೊಳಿಸಬೇಕಿದೆ ಹಾಗೂ ಇಂತಹ ತಾಂತ್ರಿಕ ದೋಷಗಳನ್ನು ಕೂಡಲೇ ಸರಿಪಡಿಸಿ, ಶುಲ್ಕ ಪಾವತಿಸುವ ಪ್ರಕ್ರಿಯೆಯನ್ನು ಸುಗಮಗೊಳಿಸಬೇಕಿದೆ.
– ಎಂ. ಪಿ. ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.
ತೆರವಾಯಿತೆ ಫುಟ್ಪಾತ್ನಲ್ಲಿ ಕಟ್ಟಿಕೊಂಡಿದ್ದ ಅನ್ನದ ಬಟ್ಟಲು; ನಿರುದ್ಯೋಗ ನಿವಾರಣಾತೊಟ್ಟಿಲು ಶಕ್ತಿ ತುಂಬಲಿ ಮತ್ತೊಂದು ಕಟ್ಟಲು ಎಲ್ಲರ ಜೀವನ ಜಾಲವೇ ಮುಂದಕೂ…
ಕೆಪಿಎಸ್ಸಿ ಭ್ರಷ್ಟಾಚಾರದ ಕುರಿತು ಇತ್ತೀಚಿನ ಸುದ್ದಿ ಕಣ್ಣು ತೆರೆಸುವಂತಿದೆ. ದಕ್ಷ ಅಧಿಕಾರಿಗಳನ್ನು ಆರಿಸಬೇಕಾದ ಸಾಂವಿಧಾನಿಕ ಸಂಸ್ಥೆಯ ಅಧ್ಯಕ್ಷರೇ ಅಮಾನತ್ತುಗೊಂಡಿರುವುದು ಇಡೀ…
ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ…
ಸುಪ್ರೀಂಕೋರ್ಟ್ ಆದೇಶದಂತೆ ಬೆಂಗಳೂರಿನ ನಂತರ ಈಗ ಮೈಸೂರಿನಲ್ಲೂ ಫುಟ್ಪಾತ್ ಒತ್ತುವರಿ ತೆರವು ಮಾಡುತ್ತಿರುವುದು ಸ್ವಾಗತಾರ್ಹ. ಇದರಿಂದ ಪಾದಚಾರಿಗಳಿಗೆ ಅನುಕೂಲವಾಗುತ್ತದೆ. ಇದೇ…
ಡಿಜಿಟಲ್ ಗುರುತಿನ ವ್ಯವಸ್ಥೆಯಾಗಿ ಹುಟ್ಟಿಕೊಂಡ ಆಧಾರ್, ಡಿಜಿಟಲ್ ಆಡಳಿತಕ್ಕೆ ಚುಕ್ಕಾಣಿಯಾಗತೊಡಗಿದ್ದು, ಜನರಲ್ಲಿ ತಮ್ಮ ಖಾಸಗಿತನದ ಸುರಕ್ಷತೆಯ ಬಗ್ಗೆ ಆತಂಕಗಳನ್ನು ನಿಧಾನಕ್ಕೆ…
ದೂರ ನಂಜುಂಡಸ್ವಾಮಿ ಜಯಪುರ ಹೋಬಳಿ ವ್ಯಾಪ್ತಿಯಲ್ಲಿ ಬೆಳೆ ಒಣಗುತ್ತಿರುವ ಹಿನ್ನೆಲೆಯಲ್ಲಿ ಅನ್ನದಾತರು ಕಂಗಾಲು ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿ…