ಓದುಗರ ಪತ್ರ
ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ೮ ರೈಲು ಸೇವೆಗಳನ್ನು ವಿಸ್ತರಣೆ ಮಾಡಲಾಗುವುದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅಶೋಕಪುರಂ ರೈಲ್ವೆ ನಿಲ್ದಾಣದ ಟ್ರ್ಯಾಕ್ ೧ರಿಂದ ೫ ಸಂಪೂರ್ಣವಾಗಿ ವಿದ್ಯುದ್ದೀಕರಣಗೊಂಡಿದ್ದು, ನೈಋತ್ಯ ರೈಲ್ವೆ ಇಲಾಖೆಯ ಪರಿಶ್ರಮ ಹಾಗೂ ಕಾರ್ಯಕ್ಷಮತೆ ಪ್ರಶಂಸನೀಯವಾಗಿದೆ ಎಂದು ತಿಳಿಸಿದ್ದಾರೆ. ಈ ರೈಲು ಸೇವೆ ವಿಸ್ತರಣೆಯಿಂದ ರೈಲ್ವೆ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗುವ ಜತೆಗೆ ಮೈಸೂರಿನ ಕೇಂದ್ರ ರೈಲ್ವೆ ನಿಲ್ದಾಣದ ಮೇಲಿನ ಒತ್ತಡವನ್ನೂ ಸ್ಪಲ್ಪಮಟ್ಟಿಗಾದರೂ ನಿಯಂತ್ರಿಸಲು ಸಾಧ್ಯವಾಗುತ್ತದೆ. ಇದಕ್ಕೆ ಕಾರಣರಾದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ರವರಿಗೆ ಧನ್ಯವಾದಗಳು.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…