Andolana originals

ಓದುಗರ ಪತ್ರ: ಮೂಲ ಸೌಕರ್ಯ ಕಲ್ಪಿಸಿ

ಸಾಲಿಗ್ರಾಮ ತಾಲ್ಲೂಕಿನ ನಿಜಗನಹಳ್ಳಿ ಗ್ರಾಮದಲ್ಲಿ ಸರಿಯಾದ ಮೂಲಸೌಕರ್ಯಗಳಿಲ್ಲದೆ ಜನರು ಪರದಾಡುವಂತಾಗಿದ್ದು, ಇಲ್ಲಿನ ಗ್ರಾಮ ಪಂಚಾಯಿತಿಯವರ ಬೇಜವಾಬ್ದಾರಿಯಿಂದಾಗಿ ಸರ್ಕಾರದ ಯೋಜನೆಗಳು ಜನರಿಗೆ ತಲುಪುತ್ತಿಲ್ಲ.

ನಿಜಗನಹಳ್ಳಿ ಗ್ರಾಮದಿಂದ ಮಾರಗೌಡನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ೨೦ ವರ್ಷಗಳಿಂದಲೂ ದುರಸ್ತಿಗೊಳಿಸಿಲ್ಲ. ರಸ್ತೆಗೆ ಹಾಕಿದ್ದ ಡಾಂಬರು ಕಿತ್ತುಬಂದಿದ್ದು, ರಸ್ತೆ ಗುಂಡಿಬಿದ್ದಿದೆ. ಗ್ರಾಮದ ಅಂಗನವಾಡಿ ಕೇಂದ್ರದ ಕಟ್ಟಡವೂ ಶಿಥಿಲಗೊಂಡಿದ್ದು, ಇಂದೋ ನಾಳೆಯೋ ಬೀಳುವ ಅಪಾಯದಲ್ಲಿದೆ.

ಇಷ್ಟಿದ್ದರೂ ಅಲ್ಲಿಯೇ ಅಂಗನವಾಡಿ ಕೇಂದ್ರ ನಡೆಸುತ್ತಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಕಳುಹಿಸಲು ಆತಂಕಪಡುವಂತಾಗಿದೆ. ಇನ್ನು ಗ್ರಾಮದ ವಿದ್ಯುತ್ ಕಂಬಗಳಲ್ಲಿ ಬಲ್ಬ್‌ಗಳೇ ಇಲ್ಲದೆ ರಾತ್ರಿಯಾಗುತ್ತಿದ್ದಂತೆ ಕಗ್ಗತ್ತಲು ಆವರಿಸಿಕೊಳ್ಳುತ್ತದೆ. ಒಳಚರಂಡಿ ವ್ಯವಸ್ಥೆ ಇಲ್ಲದೆ ತ್ಯಾಜ್ಯ ನೀರೆಲ್ಲ ರಸ್ತೆಯಲ್ಲೇ ಹರಿಯುತ್ತಿದ್ದು, ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿಯವರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಈ ಭಾಗದ ಶಾಸಕರು ಕಾಳಜಿ ವಹಿಸಿ ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

andolana

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

3 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

3 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

3 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

3 hours ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

3 hours ago