Andolana originals

ಓದುಗರ ಪತ್ರ: ಮೂಲ ಸೌಕರ್ಯ ಕಲ್ಪಿಸಿ

ಸಾಲಿಗ್ರಾಮ ತಾಲ್ಲೂಕಿನ ನಿಜಗನಹಳ್ಳಿ ಗ್ರಾಮದಲ್ಲಿ ಸರಿಯಾದ ಮೂಲಸೌಕರ್ಯಗಳಿಲ್ಲದೆ ಜನರು ಪರದಾಡುವಂತಾಗಿದ್ದು, ಇಲ್ಲಿನ ಗ್ರಾಮ ಪಂಚಾಯಿತಿಯವರ ಬೇಜವಾಬ್ದಾರಿಯಿಂದಾಗಿ ಸರ್ಕಾರದ ಯೋಜನೆಗಳು ಜನರಿಗೆ ತಲುಪುತ್ತಿಲ್ಲ.

ನಿಜಗನಹಳ್ಳಿ ಗ್ರಾಮದಿಂದ ಮಾರಗೌಡನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ೨೦ ವರ್ಷಗಳಿಂದಲೂ ದುರಸ್ತಿಗೊಳಿಸಿಲ್ಲ. ರಸ್ತೆಗೆ ಹಾಕಿದ್ದ ಡಾಂಬರು ಕಿತ್ತುಬಂದಿದ್ದು, ರಸ್ತೆ ಗುಂಡಿಬಿದ್ದಿದೆ. ಗ್ರಾಮದ ಅಂಗನವಾಡಿ ಕೇಂದ್ರದ ಕಟ್ಟಡವೂ ಶಿಥಿಲಗೊಂಡಿದ್ದು, ಇಂದೋ ನಾಳೆಯೋ ಬೀಳುವ ಅಪಾಯದಲ್ಲಿದೆ.

ಇಷ್ಟಿದ್ದರೂ ಅಲ್ಲಿಯೇ ಅಂಗನವಾಡಿ ಕೇಂದ್ರ ನಡೆಸುತ್ತಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಕಳುಹಿಸಲು ಆತಂಕಪಡುವಂತಾಗಿದೆ. ಇನ್ನು ಗ್ರಾಮದ ವಿದ್ಯುತ್ ಕಂಬಗಳಲ್ಲಿ ಬಲ್ಬ್‌ಗಳೇ ಇಲ್ಲದೆ ರಾತ್ರಿಯಾಗುತ್ತಿದ್ದಂತೆ ಕಗ್ಗತ್ತಲು ಆವರಿಸಿಕೊಳ್ಳುತ್ತದೆ. ಒಳಚರಂಡಿ ವ್ಯವಸ್ಥೆ ಇಲ್ಲದೆ ತ್ಯಾಜ್ಯ ನೀರೆಲ್ಲ ರಸ್ತೆಯಲ್ಲೇ ಹರಿಯುತ್ತಿದ್ದು, ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿಯವರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಈ ಭಾಗದ ಶಾಸಕರು ಕಾಳಜಿ ವಹಿಸಿ ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago