Andolana originals

ಓದುಗರ ಪತ್ರ: ಮೂಲ ಸೌಕರ್ಯ ಕಲ್ಪಿಸಿ

ಸಾಲಿಗ್ರಾಮ ತಾಲ್ಲೂಕಿನ ನಿಜಗನಹಳ್ಳಿ ಗ್ರಾಮದಲ್ಲಿ ಸರಿಯಾದ ಮೂಲಸೌಕರ್ಯಗಳಿಲ್ಲದೆ ಜನರು ಪರದಾಡುವಂತಾಗಿದ್ದು, ಇಲ್ಲಿನ ಗ್ರಾಮ ಪಂಚಾಯಿತಿಯವರ ಬೇಜವಾಬ್ದಾರಿಯಿಂದಾಗಿ ಸರ್ಕಾರದ ಯೋಜನೆಗಳು ಜನರಿಗೆ ತಲುಪುತ್ತಿಲ್ಲ.

ನಿಜಗನಹಳ್ಳಿ ಗ್ರಾಮದಿಂದ ಮಾರಗೌಡನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ೨೦ ವರ್ಷಗಳಿಂದಲೂ ದುರಸ್ತಿಗೊಳಿಸಿಲ್ಲ. ರಸ್ತೆಗೆ ಹಾಕಿದ್ದ ಡಾಂಬರು ಕಿತ್ತುಬಂದಿದ್ದು, ರಸ್ತೆ ಗುಂಡಿಬಿದ್ದಿದೆ. ಗ್ರಾಮದ ಅಂಗನವಾಡಿ ಕೇಂದ್ರದ ಕಟ್ಟಡವೂ ಶಿಥಿಲಗೊಂಡಿದ್ದು, ಇಂದೋ ನಾಳೆಯೋ ಬೀಳುವ ಅಪಾಯದಲ್ಲಿದೆ.

ಇಷ್ಟಿದ್ದರೂ ಅಲ್ಲಿಯೇ ಅಂಗನವಾಡಿ ಕೇಂದ್ರ ನಡೆಸುತ್ತಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಕಳುಹಿಸಲು ಆತಂಕಪಡುವಂತಾಗಿದೆ. ಇನ್ನು ಗ್ರಾಮದ ವಿದ್ಯುತ್ ಕಂಬಗಳಲ್ಲಿ ಬಲ್ಬ್‌ಗಳೇ ಇಲ್ಲದೆ ರಾತ್ರಿಯಾಗುತ್ತಿದ್ದಂತೆ ಕಗ್ಗತ್ತಲು ಆವರಿಸಿಕೊಳ್ಳುತ್ತದೆ. ಒಳಚರಂಡಿ ವ್ಯವಸ್ಥೆ ಇಲ್ಲದೆ ತ್ಯಾಜ್ಯ ನೀರೆಲ್ಲ ರಸ್ತೆಯಲ್ಲೇ ಹರಿಯುತ್ತಿದ್ದು, ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿಯವರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಈ ಭಾಗದ ಶಾಸಕರು ಕಾಳಜಿ ವಹಿಸಿ ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

7 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

15 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

15 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

15 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

18 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

18 hours ago